ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್.ವಿ. ದೇಶಪಾಂಡೆ ಕೂಡ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅತೃಪ್ತರಿಗೆ ಬಿಗ್ ಶಾಕ್; ಕಾಂಗ್ರೆಸ್ನ 11, ಜೆಡಿಎಸ್ನ 3 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್
ಕಳೆದ ವಾರ ಕಾಂಗ್ರೆಸ್ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್.ಆರ್. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್ನ ಕೆ. ಗೋಪಾಲಯ್ಯ, ಕೆ.ಆರ್. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಈಗಾಗಲೇ ಕೊರೊನ ವೈರಸ್ ಪ್ರಕರಣಗಳು ಭಾರತದಲ್ಲಿ ಬೆಳಕಿಗೆ ಬಂದಿವೆ, ಈ ಬಗ್ಗೆ ಹಲವು ನ್ಯೂಸ್ ಚಾನೆಲ್ ಗಳು ಒಂದೊಂದು ರೀತಿಯ ವರದಿ ಮಾಡುತ್ತಿವೆ. ದೇಶದಲ್ಲಿ ಈಗಾಗಲೇ ಈ ವೈರಸ್ ಬಗ್ಗೆ ಭಾರಿ ಪ್ರಮಾಣದ ಜಾಗ್ರತೆ ವಹಿಸಲಾಗಿದೆ, ಏಕೆಂದರೆ ಈ ಮಹಾಮಾರಿ ವೈರಸ್ ಈಗಾಗಲೇ ಚೀನಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರ ಪ್ರಾಣ ತೆಗೆದುಕೊಂಡಿದೆ. ಕೊರೋನಾ ವೈರಸ್ ಎಂಬ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರ ಸಂಖ್ಯೆ ವಿಶ್ವದಾದ್ಯಂತ 100,000 ಮೀರಿದೆ ಎಂದು ಶನಿವಾರ ಬಿಡುಗಡೆಯಾದ ಅಧಿಕೃತ ಮಾಹಿತಿ ತಿಳಿಸಿದೆ. ಇನ್ನು…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…