ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…