ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…
ಹಗಲಿಡಿ ಸ್ಮಾರ್ಟ್ ಫೋನ್ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್ ಫೋನ್ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್ಫೋನ್ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು. ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್ ಸ್ಕ್ರೀನ್ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…