ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.