ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ…
ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.
ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…
ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?
ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-
‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.
ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-
‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’
ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ
ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.
ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-
‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!
ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.
‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-
ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.
ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.
ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.
ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…