News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3386

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • ಸುದ್ದಿ

    ನೀವು ಇನ್ಸೂರೆನ್ಸ್ ಬಳಕೆದಾರರೇ? ಆಗದರೆ ತಪ್ಪದೇ ಇದನ್ನು ಒಮ್ಮೆ ಓಧಿ…..!

    ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(30 ಡಿಸೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ….

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.