News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

3383

ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

ಮಹಾದೇವ, ಮಹಾಯೋಗಿ, ಪಶುಪತಿ, ನಟರಾಜ, ಭೈರವ, ವಿಶ್ವನಾಥ, ಭಾವ, ಭೋಲೆನಾಥ ಇತ್ಯಾದಿ. ಅತಿ ಪರಾಕ್ರಮಿಯಾಗಿದ್ದರೂ ಅಗತ್ಯಬೀಳದೇ ಉಪಯೋಗಿಸದ, ಭವ್ಯತೆಯಲ್ಲಿರುವ ಅವಕಾಶವಿದ್ದರೂ ಸರಳವಾದ, ಹಿಮಾಚ್ಛಾದಿತ ಪ್ರದೇಶದಲ್ಲಿ ನೆಲೆಸುವ, ವಜ್ರ ವೈಢೂರ್ಯಗಳಿಂದ ಭೂಷಿತನಾಗ ಬಹುದಾದರೂ ಸರಳವಾದ ಉಡುಗೆಗಳಿಂದ, ಭಕ್ತನ ನೆರವಿಗೆ ಸದಾ ಧಾವಿಸುವ, ಕೋಪಗೊಂಡರೆ ಭೂಮಿಯನ್ನೇ ಸುಟ್ಟುಬಿಡುವ ಸಾಮರ್ಥ್ಯವಿರುವ ಶಿವ ಇತರ ದೇವರುಗಳಿಗಿಂತ ಭಿನ್ನನೂ, ಜಟಿಲನೂ ಆಗಿದ್ದಾನೆ.

ಶಿವನ ತಾ೦ಡವ ನೃತ್ಯದಲ್ಲಡಗಿದೆ ಜಗತ್ತಿನ ಸೃಷ್ಟಿಯ ತತ್ವಗಳು. ಶಿವನ ಈ ಶಕ್ತಿ ಮತ್ತು ವೈಶಿಷ್ಟ್ಯಗಳನ್ನು ಕಂಡ ಭಕ್ತರು ಶಿವನಿಗೆ ಪ್ರತ್ಯೇಕವಾದ ಗುಡಿಗಳನ್ನು ಕಟ್ಟಿದ್ದಾರೆ.

ಶಿವನ ಪರಾಕ್ರಮ ಮತ್ತು ಲೀಲೆಗಳ ಬಗ್ಗೆ ಹಲವಾರು ಕಥೆಗಳಿದ್ದರೂ, ಶಿವನ ಎಂಟು ಶೃಂಗಾರ ಆಭರಣಗಳ ಬಗ್ಗೆ ಹೆಚ್ಚಿನವರಿಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದು ಮಹತ್ವದ ರಹಸ್ಯಗಳನ್ನು ತನ್ನಲ್ಲಿ ಒಳಗೊಂಡಿದೆ.

ತಲೆಯಲ್ಲಿರುವ ಅರ್ಧ ಚಂದ್ರ ಮತ್ತು ಬಿಚ್ಚಿದ ಕೂದಲಿನಲ್ಲಿ ಗಂಗೆಯ ಹರಿವು ಅವರ ಡಮರು, ಸೃಷ್ಟಿಯ ನಾದವಾಗಿದೆ. ಆಧ್ಯಾತ್ಮಿಕ ಮಹತ್ವಗಳನ್ನು ಈ ಆಭರಣಗಳು ಒಳಗೊಂಡಿದ್ದು,

ಮೂರು ಆಭರಣ:-

ಶಿವ ದೇವರ ಮೂರು ಆಭರಣಗಳು ಮೂರು ಶಕ್ತಿಗಳನ್ನು ಈ ಮೂರು ಆಭರಣಗಳು ಎತ್ತಿ ತೋರಿಸುತ್ತಿದ್ದು ಜ್ಞಾನ, ಬಯಕೆ ಮತ್ತು ಅನುಷ್ಟಾನ ಹೀಗೆ ಮೂರೂ ಶಕ್ತಿಗಳನ್ನು ಇದು ಪ್ರತಿನಿಧಿಸುತ್ತದೆ.

ಡಮರು:-

ಡಮರು ವಿಶೇಷತೆ ಡಮರು ಶಬ್ಧವನ್ನು ಪ್ರತಿನಿಧಿಸುತ್ತದೆ. ವೇದಗಳ ಶಬ್ಧವಾಗಿ ಇದನ್ನು ಪರಿಗಣಿಸಲಾಗಿದ್ದು, ಈ ಪವಿತ್ರ ಗ್ರಂಥಗಳಲ್ಲಿರುವ ಸಾರವು ದೇವರ ಮೂಲಕ ನಮ್ಮ ಜೀವನಕ್ಕೆ ಮಾರ್ಗದರ್ಶನ ಮಾಡುತ್ತದೆ.

ಸರ್ಪ:-

ಕೊರಳಲ್ಲಿರುವ ಸರ್ಪ ದೇವರ ಕೊರಳಲ್ಲಿ ಹಾರವಾಗಿರುವ ಸರ್ಪವು ಮಾನವನ ಅಹಂಕಾರದ ಪ್ರತೀಕವಾಗಿದೆ.

ಜಪಮಾಲೆ:-

ದೇವರ ಕೈಯಲ್ಲಿರುವ ಜಪಮಾಲೆ ದೇವರ ಕೈಯಲ್ಲಿರುವ ಜಪಮಾಲೆಯನ್ನು ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದೆ. ಇದು ಶುದ್ಧತೆಯ ಸಂಕೇತವಾಗಿದೆ. ಈ ಮಾಲೆಯು, ದೇವರ ಬಲಗೈಯಲ್ಲಿ ಇದ್ದು ಏಕಾಗ್ರತೆಯ ಸಂಕೇತವಾಗಿದೆ.

ಗಂಗೆ:-

ದೇವರ ಶಿರಭಾಗ ದೇವರ ಶಿರವು ಪವಿತ್ರ ನದಿ ಗಂಗೆಯನ್ನು ಪ್ರತಿನಿಧಿಸಿದೆ. ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಾದುಹೋಗುವ ಬುದ್ಧಿವಂತಿಕೆ ಧರ್ಮಗ್ರಂಥಗಳ ಬೋಧನೆಯ ಹರಿವನ್ನು ಇದು ಸಂಕೇತಿಸಿದೆ.

ಚಂದ್ರ:-

ಶಿವನ ತಲೆಯನ್ನು ಅಲಂಕರಿಸುವ ಚಂದ್ರ ಶಿವನು ಸಮಯಕ್ಕೆ ಅಧಿಪತಿಯಾಗಿದ್ದು ಆತ ಸಮಯಾತೀತ (ಅಂದರೆ ಸಮಯದ ಕಟ್ಟುಪಾಡಿಗೆ ಬಗ್ಗದವರು) ಎಂಬುದಾಗಿ ಚಂದ್ರನು ಸಂಕೇತಿಸಿದ್ದಾನೆ.

ತಿಲಕ:-

ಹಣೆಯಲ್ಲಿರುವ ತಿಲಕ ಶಿವನ ಹಣೆಯಲ್ಲಿರುವ ಗೋಲಾಕಾರದ ತಿಲಕವು ಜ್ಞಾನದ ಮೂರನೇ ಕಣ್ಣು ಎಂದೇ ಪ್ರಸಿದ್ಧವಾಗಿದೆ. ಮೂರನೇ ಕಣ್ಣು ತೆರೆದಲ್ಲಿ, ಎದುರಿಗಿರುವವರನ್ನೇ ಇದು ಸುಟ್ಟು ಬೂದಿ ಮಾಡುತ್ತದೆ ಎಂದೇ ಹೇಳಲಾಗಿದೆ.ದುಷ್ಟ ನಾಶ ಮತ್ತು ಅಜ್ಞಾನದ ಅಂತ್ಯವನ್ನು ಇದು ಸಂಕೇತಿಸುತ್ತದೆ.

ಹುಲಿಯ ಚರ್ಮ:-

ಹುಲಿಯ ಚರ್ಮದ ಮೇಲೆ ಕುಳಿತಿರುವುದು ಶಿವನು ಸ್ವತಃ ಹುಲಿಯ ಚರ್ಮವನ್ನು ಧರಿಸಿದ್ದು ಅದೇ ಪ್ರಾಣಿಯ ಚರ್ಮದ ಮೇಲೆ ಕುಳಿತಿದ್ದಾರೆ ಇದು ಅವರು ಧೈರ್ಯಶಾಲಿ ಎಂಬುದನ್ನು ಸಂಕೇತಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ..ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…