ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.
*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.
*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.
*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.
*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.
*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.
*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.
*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.
*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.
*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..
*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.
*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.
ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…
ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.
ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.
ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ. ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು,…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…