News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಶಿವರಾತ್ರಿಯಂದು ಶಿವ ಲಿಂಗವನ್ನು ಹೇಗೆ ಪೂಜಿಸಬೇಕು..?ಹೇಗೆ ಪೂಜಿಸಬಾರದು..?ತಿಳಿಯಲು ಈ ಲೇಖನ ಓದಿ…

1928

ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…

ಭಾಗವಾನ್ ಶಿವ ಲಿಂಗವನ್ನು ಪೂಜಿಸಲು ಹಲವು ಕ್ರಮಗಳಿವೆ…ಹೇಗೆಂದರೆ ಹಾಗೆ ಪೂಜಿಸುವಂತಿಲ್ಲ…ಹಾಗಾದ್ರೆ ಹೇಗೆ ಪೂಜಿಸಬೇಕು,ಹೇಗೆ ಪೂಜಿಸಬಾರದು ಮುಂದೆ ನೋಡಿ ತಿಳಿಯಿರಿ…

*ಲಿಂಗವನ್ನು ಬಿಲ್ವಪತ್ರೆಯಿಂದ ಪೂಜಿಸಿ..ತುಳಸಿಯಿಂದಲ್ಲ.

*ಶಿವಲಿಂಗಕ್ಕೆ ಹಾಲಿನ ಅಭಿಷೇಕವನ್ನು ಹಾಲಿನ ಪ್ಯಾಕೇಟ್ ನಿಂದಲೇ ಮಾಡಬೇಡಿ..ಹಾಲನ್ನು ಪಾತ್ರೆಯಲ್ಲಿ ಹಾಕಿಕೊಂಡು, ಅಭಿಷೇಕ ಮಾಡಿ.

*ತೆಂಗಿನಕಾಯಿಯನ್ನು ನೈವೇದ್ಯಕ್ಕೆ ಬಳಸಬಹುದು..ಆದರೆ ತೆಂಗಿನಕಾಯಿಯ ನೀರನ್ನು ಶಿವಲಿಂಗಕ್ಕೆ ಅಭಿಷೇಕ ಮಾಡಬೇಡಿ.

*ಈಶ್ವರನಿಗೆ ಎಲ್ಲಾ ಹಣ್ಣುಗಳನ್ನು ಅರ್ಪಿಸಬಹುದು..ಆದರೂ ಶಿವನಿಗೆ ಇಷ್ಟವಾದದ್ದು ಮರಸೇಬು ಹಣ್ಣು.

*ಮೊದಲು ಶಿವಲಿಂಗಕ್ಕೆ ಪಂಚಾಮೃತದ ಅಭಿಷೇಕ ಮಾಡಬೇಕು.

*ಶಿವನಿಗೆ ಇಷ್ಟವಾದ ಹೂಗಳು – ಬಿಳಿಬಣ್ಣದ ಹೂವುಗಳು.

*ಶಿವನಿಗೆ ಕೇದಾರ ಮತ್ತು ಚಂಪಾ ಪುಷ್ಪಗಳನ್ನು ಅರ್ಪಿಸಬೇಡಿ.

*ಭಕ್ತರು ಶಿವಲಿಂಗಕ್ಕೆ ಗಂಧವನ್ನು ಹಚ್ಚಬಹುದು , ಕುಂಕುಮವನ್ನಲ್ಲ.

*ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕ.

*ಅಭಿಷೇಕವನ್ನು ಚಿನ್ನ , ಬೆಳ್ಳಿ ಅಥವಾ ಕಂಚಿನಿಂದ ತಯಾರಿಸಿದ ನಾಗಯೋನಿಯೆಂಬ ಪಾತ್ರದಿಂದಲೇ ಮಾಡಿ..

*ಯಾವಾಗಲೂ ಪೂಜೆಗಳಿಗೆ ಸ್ಟೀಲ್ ಪಾತ್ರೆಗಳನ್ನು ಉಪಯೋಗಿಸಬೇಡಿ.

*ಶಿವಲಿಂಗವನ್ನು ನಿಮ್ಮ ಮನೆಯಲ್ಲಿಟ್ಟಿದ್ದರೆ , ಪೂಜೆ ಮಾಡುವಾಗ ಅಭಿಷೇಕಕ್ಕೆಂದು ಜಲಧಾರೆ ಎಂಬ ಪಾತ್ರೆಯನ್ನು ಉಪಯೋಗಿಸಿ..ಜಲಧಾರೆಯ ಸಹಾಯವಿಲ್ಲದೇ ಪೂಜೆ ಮಾಡಿದರೆ , ಶಿವಲಿಂಗದಿಂದ ನಕಾರಾತ್ಮಕ ಶಕ್ತಿಯ ಸಂಚಾರವಾಗುತ್ತದೆ.

ಇಲ್ಲಿ ಓದಿ :-ಶಿವನ ಈ 5 ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ..???

ಇನ್ನೂ ಹಲವಾರು ವಿಧಿ-ವಿಧಾನಗಳನ್ನು ಶಿವಪೂಜೆಯಲ್ಲಿ ನಿರ್ದೇಶಿಸಲಾಗಿದೆ.. ಅವುಗಳಲ್ಲಿ ಇವು ಮುಖ್ಯ ಅಂಶಗಳಷ್ಟೇ..!!

ಶಿವಲಿಂಗಕ್ಕೆ ಅರ್ಪಿಸಿದ ಅಥವಾ ಹಾಕಿದ ನೈವೇದ್ಯಗಳನ್ನು ತಿನ್ನಬೇಡಿ..ಇವು ಆರೋಗ್ಯಕ್ಕೆ ಮಾರಕವೆಂದು ಮೇಲೆ ತಿಳಿಸಲಾಗಿದೆ. ಈ ಅಂಶದ ಬಗ್ಗೆ ನಿಮ್ಮ ಮನಸ್ಸಿನಲ್ಲಿ ಪ್ರಶ್ನೆಯೆನಾದರೂ ಮೂಡಿದ್ದರೆ ಆ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ…

ಶಿವನು ವೈರಾಗ್ಯದ ದೇವತೆಯಾಗಿದ್ದಾನೆ. ಸಾಮಾನ್ಯ ವ್ಯಕ್ತಿಯು ಶಿವನಿಗೆ ಅರ್ಪಿಸಿದ ವಸ್ತುಗಳನ್ನು ಸ್ವೀಕರಿಸಿದರೆ ಅವನಿಗೆ ವೈರಾಗ್ಯ ಬರುವ ಸಾಧ್ಯತೆಯಿರುತ್ತದೆ. ಸಾಮಾನ್ಯ ವ್ಯಕ್ತಿಗೆ ವೈರಾಗ್ಯ ಬೇಕಾಗಿರುವುದಿಲ್ಲ. ಆದುದರಿಂದ ಶಿವಲಿಂಗಕ್ಕೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬಾರದು ಎಂದು ಹೇಳಲಾಗಿದೆ.ಶೇ. 50 ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಗೆ ಇದು ಅನ್ವಯಿಸುವುದಿಲ್ಲ, ಏಕೆಂದರೆ ಮಟ್ಟವು ಹೆಚ್ಚಿರುವುದರಿಂದ ವೈರಾಗ್ಯ ಲಹರಿಗಳ ಪರಿಣಾಮವು ಅವನ ಮೇಲಾಗುವುದಿಲ್ಲ.

ಅವನಲ್ಲಿ ಮಾಯೆಯಿಂದ ದೂರ ಹೋಗುವ ವಿಚಾರಗಳು ಆಗಲೇ ಪ್ರಾರಂಭವಾಗಿರುತ್ತವೆ. ಅದರಂತೆ ಶೇ. 50ಕ್ಕಿಂತ ಹೆಚ್ಚು ಮಟ್ಟವಿರುವ ವ್ಯಕ್ತಿಯು ಸ್ಥೂಲ ಕರ್ಮಕಾಂಡದ ಆಚೆಗೆ ಹೋಗಿರುವುದರಿಂದ ಅವನಲ್ಲಿ ಮಾನಸ- ಉಪಾಸನೆಯು ಪ್ರಾರಂಭವಾಗಿರುತ್ತದೆ. ಇಂತಹ ವ್ಯಕ್ತಿಯ ಮನಸ್ಸಿನಲ್ಲಿ ‘ಶಿವನಿಗೆ ಅರ್ಪಿಸಿದ ವಸ್ತುಗಳನ್ನು ತೆಗೆದುಕೊಳ್ಳಬೇಕು’ ಎಂಬ ಕರ್ಮಕಾಂಡದ ವಿಚಾರಗಳು ಬರುವ ಸಾಧ್ಯತೆಗಳೇ ಕಡಿಮೆಯಿರುತ್ತವೆ.

ಕೃಪೆ : ಶ್ರೀ ಶಂಕರ ಲಿಂಗೇಶ್ವರ ದೇವಸ್ಥಾನ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಸುದ್ದಿ

    ದಂಡ ಪಾವತಿಸಿದವರಿಗೆ ಉಚಿತವಾಗಿ ಹೆಲ್ಮೆಟ್ ವಿತರಿಸಿ ಪ್ರೋತ್ಸಾಹಿಸಿದ ಪೊಲೀಸ್…!

    ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…