inspirational, ಆಧ್ಯಾತ್ಮ, ದೇವರು, ದೇವರು-ಧರ್ಮ

ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ

239

ಶಿವ, ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ..

ರೈತನೊಬ್ಬ ಉರುಳಿಗೆ ತಲೆಕೊಟ್ಟಾಗ…….‌,
ಗೃಹಿಣಿಯೊಬ್ಬಳು ಬೆಂಕಿಗೆ ಆಹುತಿಯಾದಾಗ………,
ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………,
ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಾಗ……….,
ಶಾಲಾ ಮಕ್ಕಳು ಅಪಘಾತಕ್ಕೆ ಒಳಗಾದಾಗ…………‌‌,
ವೃದ್ಧರನ್ನು ಅನಾಥಾಶ್ರಮದಲ್ಲಿ ಕಂಡಾಗ………………,
ವಂಚಕರು ವಿಧಾನಸೌಧ – ಪಾರ್ಲಿಮೆಂಟಿನಲ್ಲಿ ಕುಳಿತಿರುವಾಗ…………,

ಸುಳ್ಳುಗಾರರು ಟಿವಿಯಲ್ಲಿ ಮಾತನಾಡುವಾಗ……‌..,
ಭ್ರಷ್ಟ ರು ಅಧಿಕಾರ ನಡೆಸುವಾಗ……….,
ಕಾಮಿಗಳು ಕಾವಿ ತೊಟ್ಟಿರುವಾಗ……….,
ಅನ್ನ ತಿನ್ನುವವರು ದೇಶದ್ರೋಹಿಗಳಾದಾಗ…….‌…‌,
ಮನುಷ್ಯನನ್ನು ಮುಟ್ಟಿಸಿಕೊಳ್ಳಲೇ ಅಸಹ್ಯ ಪಡುವವರಿರುವಾಗ………,
ಕುಡಿಯುವ ನೀರಿಗೆ ಹೊಡೆದಾಡುತ್ತಿರುವಾಗ…………,
ತಿನ್ನುವ ಆಹಾರಕ್ಕೆ ಕಲಬೆರಕೆ ಮಾಡುತ್ತಿರುವಾಗ……..,
ಸೈನಿಕರ ಪತ್ನಿಯರು ವಿಧವೆಯರಾಗುತ್ತಿರುವಾಗ…………,
ಮೋಸಗಾರರು ಜ್ಯೋತಿರ್ಲಿಂಗಗಳನ್ನು ಸುತ್ತುತ್ತಿರುವಾಗ……..,
ಕಪಟಿಗಳು ನಿನ್ನ ಹೆಸರಲ್ಲಿ ಉಪವಾಸ – ಜಾಗರಣೆ ಮಾಡುತ್ತಿರುವಾಗ…..‌,

ನೆನಪಾಗುವೆ ನೀನು ಶಿವ…….ಆದರೆ,………….
ಶತಶತಮಾನಗಳಿಂದ ಬರುವೆಯೆಂದು ನಂಬಿಸಿ ಎಂದಿಗೂ ಬಾರದ ಮೋಸಗಾರ ನೀನೋ…..
ಅಥವಾ,ನೀನು ಬರುವೆಯೆಂದು ಶತಶತಮಾನಗಳಿಂದ ಕಾಯುತ್ತಿರುವ ಮೂರ್ಖ ನಾನೋ……….

ಒಂದಂತು ನಿಜ…ನೀನು ಪ್ರತ್ಯಕ್ಷವಾಗುವವರೆಗೂ, ನಿನ್ನನ್ನು ನಂಬುವುದಿಲ್ಲ.
ನೀನು ಎಷ್ಟೇ ದೊಡ್ಡವನಾಗಿರು, ನೀನು ಎಷ್ಟೇ ಎತ್ತರದಲ್ಲಿರು, ನೀನು ಎಷ್ಟೇ ಶಕ್ತಿವಂತನಾಗಿರು,
ನೀನು ಎಷ್ಟೇ ಬುದ್ದಿವಂತನಾಗಿರು, ನನ್ನಂತ ಸಾಮಾನ್ಯನ ಕಷ್ಟ ಸುಖ ನೋವು ನಲಿವುಗಳಿಗೆ ಸ್ಪಂದಿಸಿ ಸರಳವಾಗಿ ಸಹಜವಾಗಿ ಮಾರ್ಗದರ್ಶನ ಮಾಡುವವರೆಗೂ ,

ನೀನೊಂದು ಭ್ರಮೆ, ನೀನೊಂದು ಕಲ್ಪನೆ, ನೀನೊಂದು ಶಿಲೆ, ನೀನೊಂದು ಗೊಂಬೆ, ನೀನೊಂದು ಭಾವ,
ನೀನೊಂದು ತರ್ಕ, ನೀನೊಂದು ಸಂಕೇತ, ನೀನೆಂದಿಗೂ ವಾಸ್ತವವಾಗಲಾರೆ.
ಎಚ್ಚರಿಕೆ…

( ಇದು ಕೇವಲ ಶಿವನಿಗೆ ಮಾತ್ರವಲ್ಲ. ಎಲ್ಲಾ ಧರ್ಮಗಳ ಎಲ್ಲಾ ದೇವರೆಂಬ ಭಾವಗಳಿಗೂ ಅನ್ವಯ.)
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ. ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ. ವಿವೇಕಾನಂದ. ಹೆಚ್.ಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಉಪಯುಕ್ತ ಮಾಹಿತಿ

    ಮಹಾಲಯ ಅಮಾವಾಸ್ಯೆ ಕಳೆದು ಒಂದು ತಿಂಗಳ ನಂತರ ದಸರಾ ಯಾಕೆ ಬರುತ್ತಿದೆ !

    ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…