ಜ್ಯೋತಿಷ್ಯ

ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

749

ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ.

ವೃಷಭ:-

ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು ಕಂಡುಬರುವವು. ಅಧಿಕಾರಿಗಳ ಅಭಿವೃದ್ಧಿ ಸಂತಸ ತರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿಯಿದೆ. ಆರ್ಥಿಕ ಅಡಚಣೆಗಳು ಹಂತ ಹಂತವಾಗಿ ನಿವಾರಣೆಯಾಗಲಿವೆ.

 

ಮಿಥುನ:

ಕೆಲಸಗಳು ನಿಧಾನವಾಗಿ ಆದರೂ ಒಂದೇ ರೀತಿಯ ಪ್ರಗತಿಯಲ್ಲಿರುವವು. ಗೃಹ ಸೌಕರ್ಯಗಳನ್ನು ಹೊಂದುವಿರಿ. ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಹರಿಸಿರಿ. ಆರ್ಥಿಕಸ್ಥಿತಿ ವೃದ್ಧಿಸಿ ಆದಾಯವು ಹೆಚ್ಚಲಿದೆ. ಅವಿವಾಹಿತರಿಗೆ ಕಂಕಣಬಲವಿರುತ್ತದೆ. ಮಕ್ಕಳ ಓದಿನ ಬಗ್ಗೆ ಕಾಳಜಿ ವಹಿಸಲಿದ್ದೀರಿ. ಮನೆಯ ಮಂದಿಯ ವೈದ್ಯಕೀಯ ವೆಚ್ಚವನ್ನು ಭರಿಸಬೇಕಾದೀತು.

ಕಟಕ :-

ಮಾನಸಿಕ ಸಮ ಚಿತ್ತತೆ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಸಂಶೋಧನಾ ಕ್ಷೇತ್ರದಲ್ಲಿ ಇರುವವರಿಗೆ ಪ್ರಸಿದ್ಧಿಯ ಗರಿ ಮುಡಿಗೇರಲಿದೆ. ಪಾರಮಾರ್ಥಿಕ ವಿಚಾರಗಳು ಮನಸ್ಸಿನಲ್ಲಿ ಮೂಡಲಿವೆ. ಸುಬ್ರಹ್ಮಣ್ಯ ದೇವರ ದರ್ಶನ ಸಾಧ್ಯತೆ. ಸ್ನೇಹಿತರ ಸಹವಾಸದಿಂದ ನೆಮ್ಮದಿ. ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾದೀತು. ಆಗಾಗ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ದಿನಾಂತ್ಯ ಶುಭವಿದೆ.

 

 ಸಿಂಹ:

ನಿಮ್ಮ ಮಾತಿಗೆ ಈಗ ಹೆಚ್ಚಿನ ಮಹತ್ವ ಬರುವುದರಲ್ಲಿ ಸಂಶಯವಿಲ್ಲ. ಅನಾವಶ್ಯಕ ಕೋಪ ತಾಪಗಳಿಂದ ಉದ್ವೇಗಕ್ಕೆ ಒಳಗಾಗುವಿರಿ. ನಿರುದ್ಯೋಗಿಗಳಿಗೆ ಅವಕಾಶಗಳು ತಪ್ಪಿ ಹೋದಾವು. ಶ್ರೀದೇವತಾದರ್ಶನ ಭಾಗ್ಯಕ್ಕೆ ಆಸಕ್ತಿ ತೋರಿ ಬಂದೀತು. ಮುಂದುವರಿಯಬೇಕು. ಆತ್ಮೀಯರೊಬ್ಬರಿಗೆ ಬದುಕಿನ ದಾರಿ ಕಲ್ಪಿಸಿಕೊಡುವಿರಿ. ಉತ್ತಮ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲಿದ್ದೀರಿ.

ಕನ್ಯಾ :-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉತ್ಸಾಹಭರಿತರಾದಾರು. ಪುಸ್ತಕ ಪ್ರಕಾಶಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೀರಿ. ನೆರೆಯವರೊಂದಿಗಿನ ಸಂಬಂಧ ವೃದ್ಧಿಯಾಗಲಿದೆ. ಕುಟುಂಬಕ್ಕೆ ಹೊಸಬರೊಬ್ಬರ ಆಗಮನ ಸಾಧ್ಯತೆ. ವ್ಯಾಪಾರ, ವ್ಯವಹಾರಗಳನ್ನು ಚೆನ್ನಾಗಿ ನಡೆಸಿಕೊಂಡು ಹೋಗಬಹುದಾಗಿದೆ. ಸಾಂಸಾರಿಕವಾಗಿ ಮನದನ್ನೆಯ ಸಲಹೆಗೆ ಸ್ಪಂದಿಸಬೇಕು.

ತುಲಾ:

ಸಾಮರ್ಥ್ಯಕ್ಕೆ ತಕ್ಕುದಾದ ಉದ್ಯೋಗ ದೊರಕಲಿದೆ. ಮಹಿಳೆಯರ ವಿಚಾರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ನಿರೀಕ್ಷಿತ ಕಾರ್ಯಸಾಧನೆಗೆ ಪ್ರಯತ್ನಬಲ ಅಗತ್ಯ. ಬಂಧುಮಿತ್ರರ ಸಹಕಾರದಿಂದ ಮುನ್ನಡೆಗೆ ಸಾಧಕವಾಗಲಿದೆ. ನಿರುದ್ಯೋಗಿಗಳಿಗೆ ಕುಜನ ಲಾಭದಿಂದ ತಾತ್ಕಾಲಿಕ ಉದ್ಯೋಗದ ಸಾಧ್ಯತೆ ತಂದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಕಾಳಜಿ ವಹಿಸಿ. ದೇವತಾ ದರ್ಶನದಿಂದ ನೆಮ್ಮದಿ.

ವೃಶ್ಚಿಕ :-

ಮನಸ್ಸು ಸಮಾಧಾನದ ಸ್ಥಿತಿಯನ್ನು ತರಲಾರದು. ಅನಾವಶ್ಯಕ ಕೋಪತಾಪಗಳು ಹೆಚ್ಚಲಿವೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಸರಕಾರಿ ವರ್ಗದವರಿಗೆ ಕಿರಿಕಿರಿ ಇರುತ್ತದೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಹೊಂದಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗಿನ ಸಂಬಂಧ ಉತ್ತಮಗೊಳ್ಳಲಿದೆ. ಪದೋನ್ನತಿಯ ವಿಚಾರ ಪ್ರಸ್ತಾಪವಾಗಿ ಸಂತಸ.

ಧನಸ್ಸು:

ಸಹೋದರನಿಗೆ ಉದ್ಯೋಗ ದೊರೆಯುವ ಸಾಧ್ಯತೆ. ಮುನ್ನಡೆಯುವ ದಿನಗಳಿಗೆ ಆಗಾಗ ಅಡಚಣೆಗಳು ಸ್ವಾಭಾವಿಕ. ನಿಮ್ಮ ಪ್ರಯತ್ನಬಲ ಹಾಗೂ ಕ್ರಿಯಾಶೀಲತೆಗೆ ಒತ್ತು ನೀಡಬೇಕಾಗುತ್ತದೆ. ಯಶಸ್ಸು ನಿಮ್ಮನ್ನು ಹಿಂಬಾಲಿಸಲಿದೆ. ಮನೆಯಲ್ಲಿ ಸಂಭ್ರಮ ಮನೆಮಾಡಲಿದೆ. ನೆರೆಯವರೊಂದಿಗೆ ಹೆಚ್ಚಿನ ಕಾಲಹರಣ ಮಾಡಬೇಕಾದೀತು. ಮನಸ್ಸಿಗೆ ನೆಮ್ಮದಿ.

ಮಕರ :-

ಪ್ರವಾಸಾದಿಗಳಿಂದ ಸಂತಸ, ಸಹೋದ್ಯೋಗಿಗಳಿಂದ ಸಹಕಾರ, ಸಾಂಸಾರಿಕವಾಗಿ ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ಚಿನ್ನಾಭರಣಗಳನ್ನು ಖರೀದಿಸುವ ಸಾಧ್ಯತೆ. ತಾಂತ್ರಿಕ ಪರಿಣತರಿಗೆ ಮಾಧ್ಯಮಗಳಲ್ಲಿ ಕೆಲಸ –ಕಾರ್ಯಗಳು ದೊರೆತು ಉತ್ತಮ ಆದಾಯ ದೊರಕುವ ಸಾಧ್ಯತೆ. ಮಕ್ಕಳಿಂದ ಸಮಾಧಾನ, ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ನೇತ್ರ ಸಂಬಂಧಿ ವ್ಯಾಧಿಗಳಿಂದ ಮುಕ್ತರಾಗಲಿದ್ದೀರಿ. ಉತ್ತಮ ಸಮಯ. ರಾಹುಬಲ, ಗುರುಬಲ, ಶನಿಬಲ ಉತ್ತಮವಿದ್ದು ಅಭಿವೃದ್ಧಿಗೆ ಪೂರಕವಾಗಲಿದೆ. ಹಿರಿಯರಿಗೆ ಕುಲದೇವತಾ ಭಾಗ್ಯವಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ತಂದೀತು. ಮಕ್ಕಳ ವ್ಯವಹಾರಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮನೆಯವರೊಂದಿಗೆ ನೆಮ್ಮದಿಯ ದಿನವನ್ನಾಗಿಸಿಕೊಳ್ಳುವಿರಿ. ಉತ್ತಮ ಆರೋಗ್ಯ ಭಾಗ್ಯ.

ಮೀನ:-

ಲಾಭ ಸ್ಥಾನದ ಕೇತು ಆಗಾಗ ನಿಮ್ಮ ಮನೋಕಾಮನೆಗೆ ಅನುಗ್ರಹ ತಂದಾನು. ದಶಮದ ಶನಿ ನಾನಾ ರೀತಿಯ ಖರ್ಚುವೆಚ್ಚಗಳಿಗೆ ಕಾರಣನಾದಾನು. ಕಚೇರಿಯ ಸಹೋದ್ಯೋಗಿಗಳಿಂದ ಪ್ರಶಂಸೆಯ ಮಾತುಗಳೊಂದಿಗೆ ಭೋಜನ ಕೂಟದಲ್ಲಿ ಭಾಗಿಯಾಗುವಿರಿ. ಸರ್ಕಾರದಿಂದ ಬರಬೇಕಾದ ಹಣ ಕೈ ಸೇರುವ ನಿರೀಕ್ಷೆ. ಹಣ ಹೂಡಿಕೆಗಳ ಬಗ್ಗೆ ಜಾಗ್ರತೆ ವಹಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…