ಜ್ಯೋತಿಷ್ಯ

ಶುಭ ಶುಕ್ರವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

545

ಇಂದು ಶುಕ್ರವಾರ,  16/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳಿತಾಗುವುದು. ಸ್ಥಿರಾಸ್ತಿ ಖರೀದಿಯ ಬಗ್ಗೆ ಮಾತುಕತೆ ಸಾಧ್ಯತೆ. ಕಿಡಿಗೇಡಿಗಳು ನಿಮಗೆ ಸಿಟ್ಟು ಬರಿಸುವ ಪ್ರಯತ್ನ ನಡೆಸಿದರೂ ನೀವು ವ್ಯವಧಾನದಿಂದಲೇ ಉತ್ತರಿಸಿ. ಶ್ರಮಪಡಿ, ಇದು ನಿಮ್ಮ ದಿನವಾದ್ದರಿಂದ ನೀವು ಖಂಡಿತವಾಗಿಯೂ ಅದೃಷ್ಟಶಾಲಿಯಾಗಿರುತ್ತೀರಿ.ಲೇವಾದೇವಿ ವ್ಯವಹಾರಗಳಿಂದಾಗಿ ಹೆಚ್ಚಿನ ಲಾಭದ ನಿರೀಕ್ಷೆ.

ವೃಷಭ:-

ಕೆಲಸ ಕಾರ್ಯಗಳಲ್ಲಿ ಕೋಪವನ್ನು ನಿಯಂತ್ರಿಸುವುದು ಒಳ್ಳೆಯದು. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.  ರಾಜಕಾರಣದ ಒಳ ಹೊರಗುಗಳ ಬಗ್ಗೆ ರಹಸ್ಯ ಮಾತುಕತೆ ಸಾಧ್ಯತೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಚಿಲ್ಲರೆ ವ್ಯಾಪಾರಸ್ಥರಿಗೆ ಹೆಚ್ಚಿನ ಆದಾಯ. ನಿಮ್ಮ ಹಿರಿಯರ ಮಾತು ಕೇಳಿ ಮತ್ತು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಾಂತವಾಗಿ ಆಲೋಚಿಸಿ.

ಮಿಥುನ:

ಸ್ವಸಾಮರ್ಥ್ಯದಿಂದ ಸಮಸ್ಯೆಗಳನ್ನು ಪರಿಹರಿಸಿ ಪರಿಸ್ಥಿತಿಯನ್ನು ಸುಧಾರಣೆ ಮಾಡಬೇಕಾದೀತು. ಅಧಿಕಾರದ ಇತಿಮಿತಿಯನ್ನರಿತು ಕಾರ್ಯ ನಿರ್ವಹಿಸುವುದು ಉತ್ತಮ. ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. ನೀವು ಗುಂಪಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ನೀವು ಹೊಸ ಸ್ನೇಹಿತರನ್ನು ಸಂಪಾದಿಸುತ್ತೀರಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ.

ಕಟಕ :-

ದೂರದ ಪ್ರಯಾಣ ಸಾಧ್ಯತೆ.ಉದ್ಯೋಗದ ವಿಚಾರವಾಗಿ ಶುಭ ಸಂದೇಶ ಬರುವುದು. ಒಂದು ತಪ್ಪಿದ ಅವಕಾಶ ಮತ್ತೆ ಮರಳದೇ ಇರಬಹುದಾದ್ದರಿಂದ ಹಿಂಜರಿಯಬೇಡಿ. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ. ಗುರಿ ತಲುಪುವಲ್ಲಿ ನಿಮ್ಮ ಶ್ರಮ ಸಾರ್ಥಕ್ಯ ಪಡೆಯುವುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು.  ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಧಾವಂತದಿಂದಾಗಿ ಆರೋಗ್ಯದಲ್ಲಿ ವ್ಯತ್ಯಯ.

 ಸಿಂಹ:

ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ. ಕೌಟುಂಬಿಕ ಜವಾಬ್ದಾರಿಗಳು ಹೆಚ್ಚಾಗುತ್ತವೆ, ಇವು ನಿಮ್ಮ ಮನಸ್ಸಿನ ಮೇಲೆ ಒತ್ತಡ ತರುತ್ತವೆ. ದೂರದವರಿಂದ ಸಂತೋಷದ ಸುದ್ದಿಯೊಂದನ್ನು ಕೇಳಲಿದ್ದೀರಿ. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ.ಸಾಮಾಜಿಕ ಮನ್ನಣೆ ದೊರಕುವುದು.

ಕನ್ಯಾ :-

ಸೃಜನ ಶೀಲ ಕುಶಲಕರ್ಮಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ನಿಮ್ಮನ್ನು ಯಾರಾದರೂ ಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಲಭ್ಯವಿರುವ ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಿ. ವ್ಯಾಪಾರದಲ್ಲಿ ತೊಡಗಿದವರಿಗೆ ಉತ್ತಮ ಲಾಭ ದೊರಕಲಿದೆ. ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ವೃತ್ತಿಯಲ್ಲಿ ಅಥವಾ ವಾಸಸ್ಥಳದಲ್ಲಿ ಬದಲಾವಣೆ ಸಾಧ್ಯತೆ ಇದೆ. ಸಂಗಾತಿಯ ಬೇಕು ಬೇಡಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಒಳಿತಾಗುವುದು. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಂದು ನೀವು ಉತ್ತಮ ವಿಚಾರಗಳಿಂದ ತುಂಬಿರುತ್ತೀರಿ

ತುಲಾ:

ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ಮಾತನಾಡಿ. ಮನೆಯಿಂದ ಹೊರಡುವಾಗಲೇ ಪೂರ್ವ ತಯಾರಿ ಮಾಡಿಕೊಂಡು ಬಟ್ಟೆ ಅಂಗಡಿಗೆ ಪ್ರವೇಶಿಸುವುದರಿಂದ ಅನುಕೂಲವಾಗುವುದು. ಅನ್ಯಮೂಲದ ಸುದ್ದಿಯನ್ನು ಪರಿಶೀಲಿಸಬೇಕು.ಹಣಕಾಸಿನ ವಿಷಯದಲ್ಲಿ ಅಲ್ಪ ವ್ಯತ್ಯಯ ಕಂಡುಬರುವುದು. ನೀವು ಇಂದು ಚಿಕ್ಕ ಆದರೆ ಪ್ರಮುಖವಾದ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

ವೃಶ್ಚಿಕ :-

ಆರೋಗ್ಯದ ಕಡೆ ಗಮನ ಕೊಡಿ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ವೆಚ್ಚದ ಏರಿದರೂ ಆದಾಯದಲ್ಲಿನ ಹೆಚ್ಚಳ ನಿಮ್ಮ ಖರ್ಚುಗಳನ್ನು ನೋಡಿಕೊಳ್ಳುತ್ತದೆ.ನಿಮ್ಮ ಕೆಲಸದಲ್ಲಿನ ತಪ್ಪನ್ನು ಒಪ್ಪಿಕೊಳ್ಳುವುದು ನಿಮ್ಮ ಪರವಾಗಿ ಕೆಲಸ ಮಾಡುತ್ತದೆ. ಆದರೆ ನೀವು ಅದನ್ನು ಹೇಗೆ ಸುಧಾರಿಸಬಹುದೆಂದು ವಿಶ್ಲೇಷಿಸಬೇಕು.

ಧನಸ್ಸು:

ಮನೆಯ ಹಿರಿಯರ ಆರೋಗ್ಯದ ವಿಷಯದಲ್ಲಿ ಆಸ್ಪತ್ರೆ ಖರ್ಚು ಬರುವ ಸಂಭವವಿದೆ. ವಿವಾಹಾಕಾಂಕ್ಷಿಗಳಿಗೆ ಸ್ವಲ್ಪಮಟ್ಟಿನ ತೊಡಕುಂಟಾದೀತು. ನಿಮ್ಮ ಸಂಗಾತಿ ಇಂದು ನಿಮ್ಮಿಂದ ನಿರಾಶೆ ಹೊಂದಿರುವಂತೆ ಕಾಣುತ್ತದೆ ಮತ್ತು ನಿಮಗೆ ಅದು ತಿಳಿಯುತ್ತದೆ. ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವಿರಿ.ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ.

ಮಕರ :-

ಆರ್ಥಿಕ ಸುಧಾರಣೆಯನ್ನು ಕಂಡುಕೊಳ್ಳುವ ದಿನ. ನಿಮ್ಮ ಒಳ್ಳೆಯ ನಿರ್ಧಾರದಿಂದಾಗಿ ಸಹೋದ್ಯೋಗಿಗಳ ಸಂತಸಕ್ಕೆ ಕಾರಣರಾಗುವಿರಿ. ಮನೆಯ ಕರ್ತವ್ಯಗಳನ್ನು ತಪ್ಪಿಸುವುದು ಮತ್ತು ಹಣಕ್ಕಾಗಿ ಪರಿತಪಿಸುವುದು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಹಾನಿ ತರಬಹುದು. ನೀವು ಶ್ರಮ ಮತ್ತು ತಾಳ್ಮೆಯ ಮೂಲಕ ನಿಮ್ಮ ಗುರಿಗಳನ್ನು ತಲುಪುತ್ತೀರಿ.

ಕುಂಭ:-

ಬ್ಯಾಂಕ್ ವ್ಯವಹಾರಗಳಿಂದ ಹೆಚ್ಚಿನ ಅನುಕೂಲ ದೊರಕಲಿದೆ. ಮಹತ್ವದ ವಿಚಾರವೊಂದರ ಪೂರ್ವ ತಯಾರಿಯ ಮಾತುಕತೆಗಳಿಗೆ ಸಂಬಂಧಿರೊಬ್ಬರು ಚಾಲನೆ ಮಾಡುವರು. ಯಾವುದಕ್ಕೂ ಹಿರಿಯರೊಂದಿಗೆ ಚರ್ಚಿಸಿ ಕಾರ್ಯಪ್ರವೃತ್ತರಾಗಿ. ಪುರಾಣ ಪುರುಷರ ಅಥವಾ ಧಾರ್ಮಿಕ ಪುಸ್ತಕಗಳನ್ನು ಓದುವತ್ತ ಗಮನ ಕೊಡಿ. ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ನಿಮ್ಮನ್ನೇ ಸ್ವಲ್ಪ ಬದಲಾಯಿಸಲು ಇರಬೇಕು ಹಾಗೂ ಜನರು ನಿಮ್ಮ ಸಲುವಾಗಿ ಬದಲಾಗಲು ಇರಬಾರದು.

ಮೀನ:-

ಆರ್ಥಿಕವಾಗಿ ಅಭಿವೃದ್ಧಿಯನ್ನು ಸಾಧಿಸುವಿರಿ. ನಿಮ್ಮ ವೃತ್ತಿಗೆ ಗೌರವ ತರುವಂತಹ ಕೆಲಸ ನಿಮ್ಮಿಂದಾಗುವುದು. ಪ್ರೇಮಜೀವನವು ಇಂದು ನಿಮ್ಮನ್ನು ಆಶೀರ್ವದಿಸಿರುವಂತೆ ತೋರುತ್ತದೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಉದ್ಯೋಗ, ವ್ಯವಹಾರಗಳಲ್ಲಿ ಕೂಲಂಕುಷ ಅವಲೋಕನ ಮಾಡುವುದು ಒಳಿತು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ವೆಚ್ಚ ಭರಿಸಬೇಕಾದೀತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಸುದ್ದಿ

    ಬಿ.ಎಸ್.ವೈ. ಸರ್ಕಾರದಿಂದ ಮನೆ ಕಟ್ಟುವವರಿಗೊಂದು ಸಂತಸದ ಸುದ್ದಿ..ಏನೆಂದು ತಿಳಿಯಲು ಇದನ್ನೊಮ್ಮೆ ಓದಿ…!

    ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…