ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ..

ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ ಕ್ರಿಯೆ. ಬ್ಲಾಗ್ ಬರೆಯುವ ವ್ಯಕ್ತಿಯೇ ಬ್ಲಾಗರ್. ಬ್ಲಾಗಿಂಗ್ ಕೂಡ ಉತ್ತಮ ಆದಾಯ ತಂದುಕೊಡಬಲ್ಲ ವ್ಯವಹಾರ ಆಗಿದೆ. ಒಂದು ರೂಪಾಯಿಯ ಖರ್ಚು ಇಲ್ಲದೆ ನೀವು ಬ್ಲಾಗ್ ಖಾತೆಯನ್ನು ತೆರೆಯಬಹುದು. ಬ್ಲಾಗಿಂಗ್ ಮೂಲಕ ಹೆಚ್ಚು ಹಣ ಸಂಪಾದಿಸಬೇಕೆಂದರೆ ಹೆಚ್ಚು ತಾಳ್ಮೆ, ಕಠಿಣ ಪರಿಶ್ರಮ ಬೇಕಾಗುತ್ತದೆ.

ಇನ್ನು ಟ್ಯಾಲೆಂಟ್ ಒಂದಿದ್ದರೆ ಶೂನ್ಯ ಬಂಡವಾಳದಲ್ಲಿ ದುಡಿಯಬಹುದಾದ ದಾರಿ ಇಲ್ಲಿದೆ ನೋಡಿ.. ಯೂಟ್ಯೂಬ್ ಚಾನಲ್ ಗಳಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುವ ಮೂಲಕ ಹಣ ಸಂಪಾದಿಸಬಹುದಾಗಿದೆ.. ಇದಕ್ಕೆ ಯಾವುದೇ ರೀತಿಯಾದ ಹಣವನ್ನು ಕೊಡಬೇಕಾಗಿಲ್ಲ.. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡರೆ ಸಾಕು..

ನಿಮ್ಮ 1 ತಿಂಗಳ ಸಮಯವನ್ನು ಟೈಲರಿಂಗ್ ಕಲಿಯುವುದಕ್ಕೆ ವ್ಯಯಿಸಿದರೆ ಸಾಕು.. ಇದರಿಂದ ಯಾವ ಇಂಜಿನಿಯರ್ ಗೂ ಕಡಿಮೆ ಇಲ್ಲದಂತೆ ದುಡಿಯಬಹುದು.. ಹೌದು ಇತ್ತೀಚೆಗಿನ ದಿನಗಳಲ್ಲಿ ಟೈಲರಿಂಗ್ ಒಂದು ಬಹು ಬೇಡಿಕೆಯ ಉದ್ಯೋಗವಾಗಿದೆ.. ಏಕೆಂದರೆ ಜನರು ಹೊಸ ಬಟ್ಟೆ ಗಳನ್ನು ಖರೀದಿಸಲೇ ಬೇಕು.. ಬಟ್ಟೆಯನ್ನು ಹೊಲಿಸಲೇ ಬೇಕು.. ಹೆಣ್ಣು ಮಕ್ಕಳ ಉಡುಗೆಗಳ ಹೊಲಿಗೆಯನ್ನು ಕಲಿತರೆ ಒಳ್ಳೆಯ ಆದಾಯವನ್ನು ಪಡೆಯಬಹುದಾಗಿದೆ.. ಇದಕ್ಕೆ ಒಂದು ಟೈಲರಿಂಗ್ ಮೆಷಿನ್ ಗಾಗಿ ಒಂದು 5 ಸಾವಿರ ಬಂಡವಾಳವಿದ್ದರೆ ಸಾಕು..

ಸೌಂದರ್ಯಪ್ರಜ್ಞೆ ಇರುವ ಇಂದಿನ ದಿನಗಳಲ್ಲಿ ಬ್ಯೂಟಿಷಿಯನ್ ಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಮನೆ ಬಾಗಿಲಿಗೆ ಸೇವೆ ನೀಡಿದರೆ ಇದರಿಂದ ಉತ್ತಮ ಲಾಭವನ್ನೆ ಪಡೆಯಬಹುದಾಗಿದೆ. ಬ್ಯೂಟಿಷಿಯನ್ ಜ್ಞಾನ ಹೊಂದಿರುವವರು ಈ ಉದ್ಯೋಗದಿಂದ ಹೆಚ್ಚೆಚ್ಚು ಆದಾಯವನ್ನು ಗಳಿಸಬಹುದಾಗಿದೆ. ಇಂತವರು ಮನೆ ಬಾಗಿಲಿಗೆ ಹೋಗಿ ಸೆವೆಯನ್ನು ಒದಗಿಸಲು ಸಿದ್ದರಾದಲ್ಲಿ ದೊಡ್ಡ ಪ್ರಮಾಣದಲ್ಲಿ ಲಾಭ ಪಡೆಯಲು ಸಾಧ್ಯ.

ಹೊರಗೆ ದುಡಿಯುವ ಜನರು ಹಸಿವು ಬಾಯಾರಿಕೆಗೆ ಮೊದಲು ಮೊರೆ ಹೋಗುವುದೇ ಜ್ಯೂಸ್ ಗಳಿಗೆ.. ಅದರಲ್ಲೂ ಆರೋಗ್ಯದ ಮೇಲೆ ಅತಿ ಹೆಚ್ಚು ಗಮನ ನೀಡುವ ಕಾಲವಿದು.. ಹಣ್ಣಿನ ಜ್ಯೂಸ್ ಸೆಂಟರ್ ಅನ್ನು ಇಟ್ಟು ಕ್ವಾಲಿಟಿ ಮತ್ತು ರುಚಿಯನ್ನು ಕಾಪಾಡಿಕೊಂಡರೆ ಒಳ್ಳೆಯ ಆದಾಯ ಗಳಿಸಬಹುದಾಗಿದೆ..

ಇದು ಕೂಡ ಸ್ವಂತ ಉದ್ಯೋಗ ಮಾಡಲು ಒಂದು ಅತ್ಯುತ್ತಮ ವಿಧಾನ ವಾಗಿದೆ.. ನಿಮ್ಮ ಊರಿನ ಯಾವುದಾದರು ಶಾಲಾ ಕಾಲೇಜು ಇರುವ ಸ್ಥಳದಲ್ಲಿ ಕ್ಸೆರಾಕ್ಸ್ ಹಾಗೂ ಸ್ಟೇಷನರಿ ಅಂಗಡಿ ಇಟ್ಟರೆ ಒಳ್ಳೆಯ ಲಾಭ ಗಳಿಸಬಹುದು.. ಕಾಲೇಜುಗಳಲ್ಲಿ ಯಾವ ಮಟ್ಟಕ್ಕೆ ಜೆರಾಕ್ಸ್ ಮಾಡಿಸಲು ಕೊಡುತ್ತಾರೆ ಎಂಬುದು ಎಲ್ಲರಿಗೂ ತಿಳಿದೇ ಇದೆ..

ಉದ್ಯೋಗ ಮಾಡಬಯಸುವವರು ವಿದ್ಯಾವಂತರಾಗಿದ್ದರೆ ಸಾಕು.. ಈ ಕೆಲಸವನ್ನು ನಿರಾಯಾಸವಾಗಿ ಮಾಡಬಹುದು.. ಇದಕ್ಕೆ ಒಂದು ಪುಟ್ಟ ಹಾಲ್ ಅಥವಾ ರೂಮ್ ಇದ್ದರೇ ಸಾಕು.. ಬಂಡವಾಳವೇ ಬೇಕಾಗಿಲ್ಲ.. ಇದಕ್ಕೆ ನೀವು ಬುದ್ದಿವಂತರಾಗಿದ್ದರೆ ಸಾಕು.. ಜೊತೆಗೆ ನಿಮ್ಮ ಕೆಲಸವನ್ನು ಜಾಹಿರಾತು ಮಾಡಿ ಅತಿ ಹೆಚ್ಚು ಆದಾಯ ಪಡೆಯಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…