ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!