ಸುದ್ದಿ

ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

361

ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್‌ ಸೈನ್ಸ್‌ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್‌ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್‌ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್‌ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್‌ ಠಾಣೆಗೂ ಲಿಂಕ್‌ ಹೊಂದಿ ಅಲ್ಲೂ ಸೈರನ್‌ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್‌ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್‌ಡಿಎಲ್‌ಗೇ ಮಾರಬಹುದು.

ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್‌ ಸಂಖ್ಯೆ 9448777045 ಸಂಪರ್ಕಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಸುದ್ದಿ

    ನಿಮ್ಮ ಕಿಡ್ನಿಗೆ ಅಪಾಯ ತರುವಂತಹ 10 ಸಂಗತಿಗಳು ಗಮನವಿರಲಿ…!

    ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….