ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…