ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…