ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…