ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್.ಐ.ಸಿ ಯ ಮನಿ ಬ್ಯಾಕ್ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್ ಸೈನ್ಸ್ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್ ಠಾಣೆಗೂ ಲಿಂಕ್ ಹೊಂದಿ ಅಲ್ಲೂ ಸೈರನ್ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್ಡಿಎಲ್ಗೇ ಮಾರಬಹುದು.
ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್ ಸಂಖ್ಯೆ 9448777045 ಸಂಪರ್ಕಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್ಎಲ್ ಕಂಪನಿಯ ಸಿಎಫ್ಒ…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್ಮೆಂಟ್ (ಪಿಎಚ್ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…