News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

440

ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್‌ ಸೈನ್ಸ್‌ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್‌ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್‌ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್‌ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್‌ ಠಾಣೆಗೂ ಲಿಂಕ್‌ ಹೊಂದಿ ಅಲ್ಲೂ ಸೈರನ್‌ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್‌ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್‌ಡಿಎಲ್‌ಗೇ ಮಾರಬಹುದು.

ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್‌ ಸಂಖ್ಯೆ 9448777045 ಸಂಪರ್ಕಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ದೇಶ-ವಿದೇಶ

    ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವ ಮಕ್ಕಳಿಗೆ ಕಾದಿದೆ ಮಾರಿ ಹಬ್ಬ!ಮೋದಿ ಸರ್ಕಾರ ತರಲಿದೆ ಹೊಸ ಕಾನೂನು?

    ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.