News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

437

ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ ರೂಪದಲ್ಲಿ ಶ್ರೀಗಂಧ ಮರಳಿ ದುಡ್ಡು ಕೊಡುತ್ತಾ ಇರುತ್ತದೆ.

ಕೃಷಿ ಕ್ಷೇತ್ರದ ಸಾಧಕಿ ಕವಿತಾ ಮಿಶ್ರಾರವರ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇದೆ. ಕಂಪ್ಯೂಟರ್‌ ಸೈನ್ಸ್‌ ಡಿಪ್ಲೋಮಾ ಜೊತೆಗೆ ಎಂಎ ಸೈಕಾಲಜಿ ಓದಿರುವ ಇವರು, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಗ್ರಾಮದ ತಮ್ಮ 10 ಎಕರೆ ಬರಡು ಭೂಮಿಯಲ್ಲಿ ಸಾವಯವ ಕೃಷಿ ಹಾಗೂ ಹನಿ ನೀರಾವರಿ ಮೂಲಕ, ಆ ಬರಡು ಭೂಮಿಯನ್ನ ಸ್ವರ್ಗಮಾಡಿದ್ದಾರೆ. 2100 ಶ್ರೀಗಂಧ, 1500 ದಾಳಿಂಬೆ, 90 ಮಾವು, 300 ನಿಂಬೆ, 800 ಸೀಬೆ, 150 ನೇರಳೆ, 150 ಬೆಟ್ಟದ ನಲ್ಲಿಕಾಯಿ, 150 ನುಗ್ಗೆ, 100 ಕರಿಬೇವು, 100 ಮಲ್ಲಿಗೆ, 100 ತೆಂಗು, 450 ಸೀತಾಫಲ… ಜೊತೆಗೆ ಮೂಸಂಬಿ, ಸಪೋಟ, ಬಾರೇಹಣ್ಣು, ಮತ್ತಿ, ರಕ್ತಚಂದನ, ಕಾಫಿ, ಮೆಣಸು, ಅರಿಷಿಣ.. ಸೇರಿದಂತೆ ನಾನಾ ಬಗೆಯ ಗಿಡಗಳನ್ನು ಬೆಳೆದಿದ್ದಾರೆ! ಎಲ್ಲಕ್ಕಿಂತ ಮುಖ್ಯವಾಗಿ ಕೃಷಿಯಲ್ಲಿರುವ ತಮ್ಮ ಜ್ಞಾನವನ್ನು ತಮ್ಮದೇ ವಿಶಿಷ್ಟಶೈಲಿಯಲ್ಲಿ ರೈತರಿಗೆ ಹಂಚುವ ಮೂಲಕ ನೂರಾರು ರೈತರು ಕೃಷಿಯತ್ತ, ಅದರಲ್ಲೂ ಶ್ರೀಗಂಧ ಕೃಷಿಯತ್ತ ವಾಲುವಂತೆ ಮಾಡಿದ್ದಾರೆ. ಜೊತೆಗೆ ಉತ್ತಮ ಗುಣಮಟ್ಟದ ಶ್ರೀಗಂಧದ ಸಸಿಗಳನ್ನು ತಯಾರಿಸಿ ರೈತರಿಗೆ ಒದಗಿಸುವ ಕವಿತಾ ಮಿಶ್ರಾರವರನ್ನು ಹತ್ತಾರು ಪ್ರಶಸ್ತಿಗಳು ಹುಡುಕಿಕೊಂಡು ಬಂದಿವೆ.

ಈಗ ಈ ಶ್ರೀಗಂಧದ ಬೀಜದ ವಿಷಯಕ್ಕೆ ಬಂದರೆ, ಕವಿತಾ ಮಿಶ್ರಾ ಅವರು ಈಗಾಗಲೆ ಶ್ರೀಗಂಧದಿಂದ ಆದಾಯ ಪಡೆಯುತ್ತಿದ್ದಾರೆ. ಒಂದು ಎಕರೆಗೆ ಸುಮಾರು 250 ಶ್ರೀಗಂಧದ ಮರಗಳನ್ನು ನೆಡಬಹುದು. ಅದರ ಜೊತೆ ಶ್ರೀಗಂಧಕ್ಕಿಂತ ಕಡಿಮೆ ಎತ್ತರ ಬೆಳೆಯುವ ಯಾವುದಾದರೂ ಇತರೆ ಗಿಡಗಳನ್ನು ಹಾಕಬಹುದು. ಎಲ್ಲ ರೀತಿಯ ಹಣ್ಣಿನ ಗಿಡಗಳನ್ನು ಬೆಳೆದು ಅದರಿಂದ ಉಪ ಆದಾಯ ಪಡೆಯಬಹುದು. ಶ್ರೀಗಂಧವನ್ನು 15 ವರ್ಷ ಮೇಲ್ಪಟ್ಟು ಕಟಾವು ಮಾಡಬಹುದು, ಅಲ್ಲಿಯವರೆಗೆ ಇತರ ಮಿಶ್ರ ಬೆಳೆ ಹಾಗೂ ಶ್ರೀಗಂಧದ ಬೀಜದಿಂದ ಹಣ ಗಳಿಸಬಹುದು. ಹೆಚ್ಚು ನೀರು, ಗೊಬ್ಬರ , ಕಾಳಜಿ ಬೇಡದ ಶ್ರೀಗಂಧ ನಾಟಿ ಮಾಡಿದ ಮೂರು ವರ್ಷದಿಂದ ಬೀಜ ಕೊಡಲು ಆರಂಭಿಸುತ್ತದೆ. ಮೊದಲ ಕೆಲವು ವರ್ಷ ಕಡಿಮೆ ಬೀಜಗಳು ದೊರಕುತ್ತವೆ, ಕ್ರಮೇಣ ಹೆಚ್ಚುತ್ತಾ ಹೋಗುತ್ತದೆ. ಒಂದು ಗಿಡದಿಂದ ಒಂದೆರಡು ಕೆ.ಜಿ ಯಿಂದ ಹಿಡಿದುಎಂಟ್ಹತ್ತು ಕೆ.ಜಿಯವರೆಗೆ ಬೀಜಗಳು ದೊರೆಯುತ್ತವೆ. ಬೆಲೆಯ ಬಗ್ಗೆ ಹೇಳಬೇಕೆಂದರೆ, ಒಂದು ಕೆ.ಜಿ ಬೀಜಕ್ಕೆ 500 ರಿಂದ ಹಿಡಿದು 1200 ರವರೆಗೆ ಇದೆ. ಔಷಧಿ ತಯಾರಿಸುವ ಕಂಪನಿಗಳು ಸದ್ಯ ಕೆಜಿಗೆ 1000ರು. ನಂತೆ ಕೊಳ್ಳುತ್ತಿದ್ದಾರೆ. ಒಂದು ಎಕರೆಗೆ 250 ಗಿಡ, ಒಂದು ಗಿಡದಿಂದ ಕೇವಲ ಒಂದೇ ಕೆ.ಜಿ ಬೀಜದಂತೆ ಲೆಕ್ಕ ಮಾಡಿದರೂ, ಬೀಜದಿಂದಲೇ ಎರಡು ಲಕ್ಷ ಆದಾಯ ಗಳಿಸಬಹುದು.

ಶ್ರೀಗಂಧದ ಭದ್ರತೆಯ ವಿಷಯದಲ್ಲೂ ಮೊದಲಿನ ಹಾಗೆ ಆತಂಕಪಡಬೇಕಿಲ್ಲ, ಈಗ ತಂತ್ರಜ್ಞಾನ ಸಾಕಷ್ಟುಮುಂದುವರೆದಿದೆ. ಇ ಸೆಕ್ಯೂರಿಟಿ ಅಳವಡಿಸಿ ಮನೇಲಿ ಕೂತ್ಗೊಂಡು ತೋಟ ಕಾಯಬಹುದು. ಇ-ಪ್ರೊಟೆಕ್ಷನ್‌ನಲ್ಲಿ ಶ್ರೀಗಂಧದ ಮರಗಳಿಗೆ ಒಂದು ಮೈಕ್ರೋಚಿಪ್‌ ಅಳವಡಿಸಲಾಗುವುದು, ಕಳ್ಳ ಮರದ ಹತ್ತಿರ 2 ಅಡಿ ದೂರದಲ್ಲಿ ಸುಳಿದಾಡಿದರೂ ಸೈರನ್‌ ಕೂಗುತ್ತದೆ. ಅಷ್ಟೇ ಅಲ್ಲ ಸಮೀಪದ ಪೊಲೀಸ್‌ ಠಾಣೆಗೂ ಲಿಂಕ್‌ ಹೊಂದಿ ಅಲ್ಲೂ ಸೈರನ್‌ ಹೊಡೆದು ಕೊಳ್ಳುತ್ತದೆ. ಮತ್ತೊಂದು ಪ್ರಯೋಜನವೆಂದರೆ ಅಕಸ್ಮಾತ್‌ ಕಳ್ಳ ಕದ್ದೊಯ್ದರೂ ಕದ್ದ ಮಾಲು ಎಲ್ಲಿದೆ ಎಂಬುದನ್ನು ಕರಾರುವಕ್ಕಾಗಿ ಪತ್ತೆ ಹಚ್ಚಬಹುದು. ಮಾರುಕಟ್ಟೆಬಗ್ಗೆಯೂ ಚಿಂತಿಸಬೇಕಿಲ್ಲ. ಹೊರಗೆ ಮಾರಾಟ ಮಾಡಲಾರದವರು ಕೆಎಸ್‌ಡಿಎಲ್‌ಗೇ ಮಾರಬಹುದು.

ಮಾಹಿತಿಯ ಆಗರ ಕವಿತಾ ಮಿಶ್ರಾ : ತೋಟದಲ್ಲೇ ಮನೆ ಮಾಡಿಕೊಂಡು ಹತ್ತಾರು ಮರಗಿಡಗಳ ಜೊತೆಗೆ ಹಸು, ಕುರಿ, ಕೋಳಿ ಸಾಕಾಣಿಕೆ ಕೂಡ ಮಾಡುತ್ತಿರುವ ಕವಿತಾರವರು ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಗಳನ್ನ ಸುಲಲಿತವಾಗಿ ಮಾತನಾಡಬಲ್ಲರು. ಕೃಷಿಯ ಬಗ್ಗೆ ಅಪಾರ ಜ್ಞಾನ ಹೊಂದಿರುವ ಇವರು ಅದನ್ನು ರೈತರಿಗೆ ವರ್ಗಾಯಿಸಿ ಅವರ ಮನ ಬದಲಿಸಬಲ್ಲರು. ತಮ್ಮಲ್ಲೇ ಶ್ರೀಗಂಧದ ಸಸಿ ತಯಾರು ಮಾಡುವ ಇವರು ಅವುಗಳನ್ನು ಕೇವಲ 35 ರೂ.ನಂತೆ ಮಾರಾಟ ಮಾಡುತ್ತಾರೆ. ಜೊತೆಗೆ ಅಪಾರ ತಾಂತ್ರಿಕ ಮಾಹಿತಿ ನೀಡುತ್ತಾರೆ. ಹೆಚ್ಚಿನ ಮಾಹಿತಿಗೆ ಸಂಜೆ 7 ರಿಂದ 9 ಗಂಟೆಯವರೆಗೆ ಅವರನ್ನು ಮೊಬೈಲ್‌ ಸಂಖ್ಯೆ 9448777045 ಸಂಪರ್ಕಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

    ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…