ವಿಶೇಷ ಲೇಖನ

ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

861

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ಶ್ರೀಗಳ ಬಾಲ್ಯ:-

ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1,1908ರಲ್ಲಿ 13 ನೇ ಮಗು ಶಿವಣ್ಣನವರಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ.

ಶ್ರೀಗಳ ಶಿಕ್ಷಣ :-

ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ. ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು.

ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆಸೇರಿದರು. ಬೆಂಗಳೂರಿನಲ್ಲಿ ‘ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ’ ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

ಶ್ರೀಗಳು ಮಠಾಧಿಪತಿಯಾಗಿದ್ದು ಹೀಗೆ…

ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ 1930ರಲ್ಲಿ ಬರ ಸಿಡಿಲು ಬಡಿದಂತಹ ಒಂದು ಘಟನೆ ನಡೆಯುತ್ತದೆ. ಅದೇನೆಂದರೆ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾಗುತ್ತಾರೆ. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನವರ ಕಡೆ ಉದ್ಧಾನ ಸ್ವಾಮಿಜಿಗಳ ದೃಷ್ಟಿ ಹರಿಯುತ್ತದೆ. ಅಷ್ಟರಲ್ಲಾಗಲೇ ಶಿವಣ್ಣನವರ ಹಿನ್ನೆಲೆಯ ಅರಿವಿದ್ದ ಉದ್ಧಾನ ಶ್ರೀಗಳು ಯಾರ ಹೇಳಿಕೆಗೂ ಕಾಯದೆ ಎಲ್ಲರ ಸಮ್ಮುಖದಲ್ಲಿ ಶಿವಣ್ಣನೇ ಈ ಮಠದ ಉತ್ತರಾಧಿಕಾರಿ ಎಂದು ಘೋಷಿಸಿ ಬಿಡುತ್ತಾರೆ.

ಎಲ್ಲರಂತೆ ಸಾಮಾನ್ಯರಾಗಿ ಕ್ರಿಯಾ ಸಮಾಧಿ ಕಾರ್ಯಕ್ಕೆ ಬಂದಿದ್ದ ಶಿವಣ್ಣನವರು ಹೋಗುವಾಗ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ ‘ಶ್ರೀ ಶಿವಕುಮಾರ ಸ್ವಾಮಿಜಿ’ಗಳಾಗಿ ಹಿಂದಿರುಗುತ್ತಾರೆ. ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗುತ್ತಾರೆ. ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಮತ್ತೆ ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜುಗಳನ್ನು ಸಂಪ್ರದಾಯಬದ್ಧವಾಗಿ ಪಾಲಿಸುತ್ತಲೂ ಹಾಗು ಶಿಸ್ತುಬದ್ಧ ವಿದ್ಯಾರ್ಥಿಯಾಗಿಯೂ ತಮ್ಮ ಒಡನಾಡಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾರೆ.ವಿದ್ಯಾಭ್ಯಾಸ ಮುಗಿದು ಸ್ವಾಮಿಜಿಯವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿ, ಅಂದಿನಿಂದ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ. ಇದಾಗಿ ಮುಂದೆ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತವೂ, ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ.

ಮಠಾಧಿಪತಿಯಾದ ನಂತರದ ಆರಂಭದ ದಿನಗಳು…

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.

ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ ಎಂಬ ಆಡು ನುಡಿಗಳೂ ಕೇಳಿಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು.

ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯಿತು. ಇದು ಸ್ವಾಮೀಜಿಯವರ ದೂರದರ್ಶಿತ್ವಕ್ಕೆ ಒಂದು ಉದಾಹರಣೆ.

ಶ್ರೀಗಳ ದಿನಚರಿ ಹೇಗಿರುತ್ತು ಗೊತ್ತಾ…

ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಿದ್ದರು. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಿದ್ದರು. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, ‘ಸಿಹಿ’ ಹಾಗೂ ‘ಖಾರ ಚಟ್ನಿ’ ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, ‘ಬೇವಿನ-ಚಕ್ಕೆ ಕಷಾಯ’ ಸೇವನೆ ಮಾಡುತ್ತಿದ್ದರು.

ನಂತರ ಮಠದ ಪ್ರಸಾದ ನಿಲಯದ ಮುಂಭಾಗದ ಮಂಚದ ಮೇಲೆ ಆಸೀನರಾಗುತ್ತಿದ್ದರು. ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತದೆ.ಮಠಕ್ಕೆ ಭೇಟಿ ಕೊಡುವ ಬಹುತೇಕ ಭಕ್ತರು ರೈತಾಪಿ ವರ್ಗದವರಾದ್ದರಿಂದ ಶ್ರೀಗಳು ಬೇರೆ ಬೇರೆ ಪ್ರದೇಶದಿಂದ ಬಂದ ರೈತರಲ್ಲಿ ಮಳೆ ಬೆಳೆಗಳ ಬಗ್ಗೆ ಪ್ರಶ್ನಿಸುತ್ತಿದ್ದರು. ಇದರ ಬಳಿಕ ಶ್ರೀಗಳು,ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಿದ್ದರು. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಿದ್ದರು. ಸಂಜೆ 4 ಗಂಟೆಯ ನಂತರ ಪುನಃ ಭಕ್ತಗಣದ ಬೇಟಿ ಮಾಡುತ್ತಿದರು. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ, ದಾಸೋಹದ ಮಾಹಿತಿ ಸುಮಾರು ರಾತ್ರಿ 9 ಗಂಟೆಯವರೆವಿಗೂ ನಡೆಯುತ್ತಿತ್ತು.

ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ ನಡೆಯುತ್ತಿತ್ತು…

ನಂತರ ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ. ಸ್ನಾನ, ಪೂಜೆ, ಮತ್ತು, ಪ್ರಸಾದ. ಒಂದು ಚಪಾತಿ ಇಲ್ಲವೇ ಒಂದು ದೋಸೆ. ಅದರ ಜೊತೆಗೆ ಚಟ್ಣಿ ಅಥವಾ ಪಲ್ಯ. ಇದಿಲ್ಲದೇ ಹೋದರೆ, ಉಪ್ಪಿಟ್ಟು, ನಂತರ ಹಣ್ಣಿನ ಸೇವನೆ ಮುಗಿಸಿ ಹತ್ತು ಗಂಟೆಗೆ ಸ್ವಾಮಿಗಳು ಸಭಾಂಗಣದಲ್ಲಿ ಹಾಜರಾಗಿರುತ್ತಿದ್ದರು. ‘ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ’ ದ ಒಂದು ದೃಶ್ಯವನ್ನು ನೋಡಿದ ಬಳಿಕ ಅಂದಿನ ದಿನದ ಕಾಯಕಕ್ಕೆ ವಿರಾಮ ಹೇಳುತ್ತಿದ್ದರು ಶ್ರೀಗಳು.

ಓದಿನೊಂದಿಗೆ ಆರಂಭ, ಓದಿನೊಂದಿಗೆ ಮುಕ್ತಾಯ…

ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದರು. ಇದು ಕನಿಷ್ಠ ಅರ್ಧತಾಸಾದರೂ ನಡೆಯುತಿತ್ತು. ಹನ್ನೊಂದು ಗಂಟೆಗೆ ಮಲಗುತ್ತಿದ್ದರು. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತಿತ್ತು. ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಿದ್ದರು. ದೂರದ ಊರುಗಳಿಗೂ ಓಡಾಡುತ್ತಿದ್ದರು. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಿದ್ದರು.

ಶ್ರೀಗಳ ಕಾಯಕಕ್ಕೆ ಒಲಿದು ಬಂದಿರುವ ಪ್ರಶಸ್ತಿಗಳು ಮತ್ತು ಸನ್ಮಾನಗಳು…

  • ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
  • ಪೂಜ್ಯ ಸ್ವಾಮೀಜಿಯವರ 100 ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.
  • 2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಮೂಲ:

ಗಣ್ಯರೊಂದಿಗೆ ಶ್ರೀಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

    ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ