News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ವಿಶೇಷ ಲೇಖನ

ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

883

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿದ್ದರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ಶ್ರೀಗಳ ಬಾಲ್ಯ:-

ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1,1908ರಲ್ಲಿ 13 ನೇ ಮಗು ಶಿವಣ್ಣನವರಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ.

ಶ್ರೀಗಳ ಶಿಕ್ಷಣ :-

ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ. ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು.

ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆಸೇರಿದರು. ಬೆಂಗಳೂರಿನಲ್ಲಿ ‘ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ’ ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

ಶ್ರೀಗಳು ಮಠಾಧಿಪತಿಯಾಗಿದ್ದು ಹೀಗೆ…

ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ 1930ರಲ್ಲಿ ಬರ ಸಿಡಿಲು ಬಡಿದಂತಹ ಒಂದು ಘಟನೆ ನಡೆಯುತ್ತದೆ. ಅದೇನೆಂದರೆ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾಗುತ್ತಾರೆ. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನವರ ಕಡೆ ಉದ್ಧಾನ ಸ್ವಾಮಿಜಿಗಳ ದೃಷ್ಟಿ ಹರಿಯುತ್ತದೆ. ಅಷ್ಟರಲ್ಲಾಗಲೇ ಶಿವಣ್ಣನವರ ಹಿನ್ನೆಲೆಯ ಅರಿವಿದ್ದ ಉದ್ಧಾನ ಶ್ರೀಗಳು ಯಾರ ಹೇಳಿಕೆಗೂ ಕಾಯದೆ ಎಲ್ಲರ ಸಮ್ಮುಖದಲ್ಲಿ ಶಿವಣ್ಣನೇ ಈ ಮಠದ ಉತ್ತರಾಧಿಕಾರಿ ಎಂದು ಘೋಷಿಸಿ ಬಿಡುತ್ತಾರೆ.

ಎಲ್ಲರಂತೆ ಸಾಮಾನ್ಯರಾಗಿ ಕ್ರಿಯಾ ಸಮಾಧಿ ಕಾರ್ಯಕ್ಕೆ ಬಂದಿದ್ದ ಶಿವಣ್ಣನವರು ಹೋಗುವಾಗ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ ‘ಶ್ರೀ ಶಿವಕುಮಾರ ಸ್ವಾಮಿಜಿ’ಗಳಾಗಿ ಹಿಂದಿರುಗುತ್ತಾರೆ. ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗುತ್ತಾರೆ. ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಮತ್ತೆ ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜುಗಳನ್ನು ಸಂಪ್ರದಾಯಬದ್ಧವಾಗಿ ಪಾಲಿಸುತ್ತಲೂ ಹಾಗು ಶಿಸ್ತುಬದ್ಧ ವಿದ್ಯಾರ್ಥಿಯಾಗಿಯೂ ತಮ್ಮ ಒಡನಾಡಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾರೆ.ವಿದ್ಯಾಭ್ಯಾಸ ಮುಗಿದು ಸ್ವಾಮಿಜಿಯವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿ, ಅಂದಿನಿಂದ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ. ಇದಾಗಿ ಮುಂದೆ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತವೂ, ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ.

ಮಠಾಧಿಪತಿಯಾದ ನಂತರದ ಆರಂಭದ ದಿನಗಳು…

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ, ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು.

ಆರಂಭದ ದಿನಗಳಲ್ಲಿ ‘ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ’ ಎಂಬ ಆಡು ನುಡಿಗಳೂ ಕೇಳಿಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು.

ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯಿತು. ಇದು ಸ್ವಾಮೀಜಿಯವರ ದೂರದರ್ಶಿತ್ವಕ್ಕೆ ಒಂದು ಉದಾಹರಣೆ.

ಶ್ರೀಗಳ ದಿನಚರಿ ಹೇಗಿರುತ್ತು ಗೊತ್ತಾ…

ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಿದ್ದರು. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಿದ್ದರು. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, ‘ಸಿಹಿ’ ಹಾಗೂ ‘ಖಾರ ಚಟ್ನಿ’ ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, ‘ಬೇವಿನ-ಚಕ್ಕೆ ಕಷಾಯ’ ಸೇವನೆ ಮಾಡುತ್ತಿದ್ದರು.

ನಂತರ ಮಠದ ಪ್ರಸಾದ ನಿಲಯದ ಮುಂಭಾಗದ ಮಂಚದ ಮೇಲೆ ಆಸೀನರಾಗುತ್ತಿದ್ದರು. ಭಕ್ತರ ಕಷ್ಟ-ಸುಖಕ್ಕೆ ಸ್ಪಂದನ, ಮಧ್ಯಾನ್ಹ ಮೂರು ಗಂಟೆಯ ವರೆವಿಗೆ ನಿರಂತರವಾಗಿ ಸಾಗುತ್ತದೆ.ಮಠಕ್ಕೆ ಭೇಟಿ ಕೊಡುವ ಬಹುತೇಕ ಭಕ್ತರು ರೈತಾಪಿ ವರ್ಗದವರಾದ್ದರಿಂದ ಶ್ರೀಗಳು ಬೇರೆ ಬೇರೆ ಪ್ರದೇಶದಿಂದ ಬಂದ ರೈತರಲ್ಲಿ ಮಳೆ ಬೆಳೆಗಳ ಬಗ್ಗೆ ಪ್ರಶ್ನಿಸುತ್ತಿದ್ದರು. ಇದರ ಬಳಿಕ ಶ್ರೀಗಳು,ನೇರವಾಗಿ ಮಠಕ್ಕೆ ಸಾಗಿ, ಸ್ನಾನ ಪೂಜೆಗಳಲ್ಲಿ ಮಗ್ನರಾಗುತ್ತಿದ್ದರು. ಇದರ ಬಳಿಕ, ಒಂದು ಎಳ್ಳಿಕಾಯಿ ಗಾತ್ರದಮುದ್ದೆ, ಸ್ವಲ್ಪವೇ ಅನ್ನ, ಮತ್ತು ತೊಗರಿಬೇಳೆ ಸಾಂಬಾರ್ ಊಟಮಾಡುತ್ತಿದ್ದರು. ಸಂಜೆ 4 ಗಂಟೆಯ ನಂತರ ಪುನಃ ಭಕ್ತಗಣದ ಬೇಟಿ ಮಾಡುತ್ತಿದರು. ಮಠದಲ್ಲಿ ಉಳಿದುಕೊಂಡು ವಿದ್ಯಾರ್ಜನೆ ಮಾಡುವ ಮಕ್ಕಳ ಕುಶಲೋಪರಿ, ದಾಸೋಹದ ಮಾಹಿತಿ ಸುಮಾರು ರಾತ್ರಿ 9 ಗಂಟೆಯವರೆವಿಗೂ ನಡೆಯುತ್ತಿತ್ತು.

ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ ನಡೆಯುತ್ತಿತ್ತು…

ನಂತರ ಹಳೆಯ ಮಠದಲ್ಲಿ ರಾತ್ರಿಯ ಕಾರ್ಯಕ್ರಮ. ಸ್ನಾನ, ಪೂಜೆ, ಮತ್ತು, ಪ್ರಸಾದ. ಒಂದು ಚಪಾತಿ ಇಲ್ಲವೇ ಒಂದು ದೋಸೆ. ಅದರ ಜೊತೆಗೆ ಚಟ್ಣಿ ಅಥವಾ ಪಲ್ಯ. ಇದಿಲ್ಲದೇ ಹೋದರೆ, ಉಪ್ಪಿಟ್ಟು, ನಂತರ ಹಣ್ಣಿನ ಸೇವನೆ ಮುಗಿಸಿ ಹತ್ತು ಗಂಟೆಗೆ ಸ್ವಾಮಿಗಳು ಸಭಾಂಗಣದಲ್ಲಿ ಹಾಜರಾಗಿರುತ್ತಿದ್ದರು. ‘ಶ್ರೀ ಜಗಜ್ಯೋತಿ ಬಸವೇಶ್ವರ ನಾಟಕ’ ದ ಒಂದು ದೃಶ್ಯವನ್ನು ನೋಡಿದ ಬಳಿಕ ಅಂದಿನ ದಿನದ ಕಾಯಕಕ್ಕೆ ವಿರಾಮ ಹೇಳುತ್ತಿದ್ದರು ಶ್ರೀಗಳು.

ಓದಿನೊಂದಿಗೆ ಆರಂಭ, ಓದಿನೊಂದಿಗೆ ಮುಕ್ತಾಯ…

ರಾತ್ರಿ ಹತ್ತೂವರೆಗೆ ಸ್ವಾಮೀಜಿ ಮಲಗುವ ವೇಳೆ ಪುಸ್ತಕ ಓದಿ ಮಲಗುವ ಹವ್ಯಾಸವಿಟ್ಟುಕೊಂಡಿದ್ದರು. ಇದು ಕನಿಷ್ಠ ಅರ್ಧತಾಸಾದರೂ ನಡೆಯುತಿತ್ತು. ಹನ್ನೊಂದು ಗಂಟೆಗೆ ಮಲಗುತ್ತಿದ್ದರು. ಓದಿನೊಂದಿಗೆ ಆರಂಭವಾಗುವ ಶ್ರೀಗಳ ದಿನಚರಿ, ಓದಿನೊಂದಿಗೆ ಮುಕ್ತಾಯವಾಗುತಿತ್ತು. ಹಲವು ದಿನಗಳಲ್ಲಿ, ಕೆಲವಾರು ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಆಹ್ವಾನಿಸುವ ಭಕ್ತರ ಮನೆಗಳಿಗೂ ಭೇಟಿನೀಡುತ್ತಿದ್ದರು. ದೂರದ ಊರುಗಳಿಗೂ ಓಡಾಡುತ್ತಿದ್ದರು. ಪ್ರಸಾದ ಸ್ವೀಕರಿಸುವ ವೇಳೆಯಲ್ಲಿ ಮಾತ್ರ ಬಿಸಿನೀರು ಸೇವಿಸುತ್ತಿದ್ದರು.

ಶ್ರೀಗಳ ಕಾಯಕಕ್ಕೆ ಒಲಿದು ಬಂದಿರುವ ಪ್ರಶಸ್ತಿಗಳು ಮತ್ತು ಸನ್ಮಾನಗಳು…

  • ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿ ಕರ್ನಾಟಕ ವಿಶ್ವವಿದ್ಯಾಲಯವು ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
  • ಪೂಜ್ಯ ಸ್ವಾಮೀಜಿಯವರ 100 ನೆ ವರ್ಷದ ಹುಟ್ಟು ಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರ ರಾಜ್ಯದ ಮಹೋನ್ನತ ಪ್ರಶಸ್ತಿಯಾದ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಶ್ರೀಗಳಿಗೆ ನೀಡಿ ಗೌರವಿಸಿದೆ.
  • 2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಮೂಲ:

ಗಣ್ಯರೊಂದಿಗೆ ಶ್ರೀಗಳು…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.