ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

258

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…