News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

280

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸವಾಲೆಸೆದ ಸ್ಯಾಂಡಲ್​ವುಡ್​ ನಟಿ..!

    ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್‌ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ.  ಸಂಚಾರ ನಿಯಮ ಉಲ್ಲಂಘಿಸಿದ ಬೈಕ್‌ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…

  • ಸುದ್ದಿ

    ಫ್ಲೈಯಿಂಗ್ ಕಿಸ್ ಕೊಟ್ಟ ವ್ಯಕ್ತಿಗೆ 3 ವರ್ಷ ಜೈಲು, 3 ಸಾವಿರ ದಂಡ ವಿಧಿಸಿದ ಕೋರ್ಟ್ ….!

    ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ  ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿ ನೆನೆಸಿದ ನೀರನ್ನು ಚೆಲ್ಲುವ ಬದಲು, ಪ್ರತಿದಿನ ಬೆಳ್ಳಗ್ಗೆ ಒಂದು ಗ್ಲಾಸ್ ಒಣ ದ್ರಾಕ್ಷಿ ನೀರು ಕುಡಿದು ನೋಡಿ…

    ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…

  • ಸುದ್ದಿ

    ಸಲ್ಮಾನ್ ಖಾನ್ ಆಸೆ ತಿಳಿದರೆ ಕನ್ನಡಿಗರು ಶಾಕ್ ಆಗುವುದು ಖಚಿತ..!ಅಷ್ಟಕ್ಕೂ ಆ ಆಸೆ ಏನು ಗೊತ್ತಾ.?

    ಬಾಲಿವುಡ್‍ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸಾಧನೆ

    ತಂದೆ ಒಂದು ಸಹಿ ಗೋಸ್ಕರ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ನೋಡಿ. ಛಲದಿಂದ ಐಎಎಸ್ ಅಧಿಕಾರಿಯಾದ ಮಗಳು!

    ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…