News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಭವಿಷ್ಯ

ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

278

ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ.

ವೃಷಭ:-

ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ ನೆರವು ಸಾಧ್ಯತೆ. ಆರ್ಥಿಕ ಸ್ಥಿತಿಯಲ್ಲಿ ಸಮತೋಲನ ಕಂಡು ಬರುತ್ತದೆ. ಪರಿಶ್ರಮದ ಬಲದಿಂದಲೇ ಉದ್ಯೋಗ ಲಾಭ. ದೇಹಾರೋಗ್ಯ ಸುಧಾರಿಸಲಿದೆ.

ಮಿಥುನ:

ಬೇರೆಯವರ ಸಲಹೆಯಿಂದಾಗಿ ಅಪಾಯದಲ್ಲಿ ಸಿಲುಕುವ ಸಾಧ್ಯತೆ. ಆರ್ಥಿಕವಾಗಿ ಉತ್ತಮ ಫ‌ಲವಿದೆ. ಸಾಂಸಾರಿಕ ಜೀವನ ಸಮಾಧಾನ ತೋರಿ ಬಂದರೂ ಮನೆ ಮಂದಿಯೊಡನೆ ಹೊಂದಾಣಿಕೆ ಅಗತ್ಯವಿದೆ. ವ್ಯಾಪಾರ ವರ್ಗದವರಿಗೆ ಅಧಿಕ ಲಾಭವಿದೆ. ಹಿರಿಯರ ಮಾತುಗಳನ್ನು ಗೌರವಿಸುವುದರಿಂದ ಆಪತ್ತಿನಿಂದ ಪಾರಾಗುವಿರಿ. ಛಲಕ್ಕೊಂದು ಬಲದೊರೆತು ಯಶಸ್ಸು ನಿಮ್ಮದಾಗಲಿದೆ.

ಕಟಕ :-

ಕಾರಿಗಳ ಕಿರಿಕಿರಿ ತಪ್ಪದು. ಬಾಕಿ ಇರುವ ಕೆಲಸ ಕಾರ್ಯಗಳು ವಿಳಂಬವಿಲ್ಲದೇ ನೆರವೇರುವ ಸಾಧ್ಯತೆ. ಸಮಾಜದ ಗೌರವಾದರಗಳು ನಿಮ್ಮನ್ನರಸಿ ಬರುವವು. ಭರವಸೆಗಳ ಈಡೇರಿಕೆಗೆ ಶ್ರಮ ವಹಿಸಬೇಕಾದೀತು. ವೃತ್ತಿರಂಗದಲ್ಲಿ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ವಿಶ್ವಾಸ ಉತ್ತಮವಲ್ಲ. ಯಾವುದೇ ವಿಚಾರದಲ್ಲಿ ವಿವೇಚನೆಯಿಂದ ವರ್ತಿಸಬೇಕಾಗುತ್ತದೆ.

 

 ಸಿಂಹ:

ಬಂಧುಗಳ ಸಲಹೆ ಮತ್ತು ಆಶ್ವಾಸನೆಗಳಲ್ಲಿ ವಿಶ್ವಾಸ ವಿಡಿ. ರಾಜಕೀಯದಲ್ಲಿ ಅನಾವಶ್ಯಕವಾಗಿ ನಿಮ್ಮ ವಿಚಾರದಲ್ಲಿ ಸಹಮತವಿರದು. ಉದ್ವೇಗ, ಕೋಪ ತಾಪಗಳಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಶ್ರೀದೇವತಾ ಪ್ರಾರ್ಥನೆಯಿಂದ ಸಮಾಧಾನ ಸಿಗಲಿದೆ. ಹೊಸ ಕೆಲಸಕಾರ್ಯಗಳಲ್ಲಿ ತೊಡಗಲು ಪ್ರಶಸ್ತವಾಗಿದೆ. ಷರತ್ತು ಬದ್ಧ ಅವಕಾಶಗಳು ದೊರಕುವ ಸಾಧ್ಯತೆ. ಉದ್ಯೋಗರಂಗದಲ್ಲಿ ಬದಲಾವಣೆ ಸಾಧ್ಯತೆ.

ಕನ್ಯಾ :-

ಸರಕಾರಿ ಕೆಲಸಕಾರ್ಯಗಳು ಮುನ್ನಡೆ ತರುತ್ತವೆೆ. ವೃತ್ತಿರಂಗದಲ್ಲಿ ಜಾಗ್ರತೆ ವಹಿಸಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಇರಬೇಕು. ದಾಯಾದಿಗಳಿಂದ ಕೆಟ್ಟ ಮಾತು ಕೇಳಿ ಬಂದು ಬೇಸರ ತಂದೀತು.ನಂಬಿ ಬಂದವರಿಗೆ ಉತ್ತಮ ಆಸರೆ ನೀಡಿ ಹರ್ಷದಾಯಕ ಸಂದೇಶ ನೀಡುವ ಸಾಧ್ಯತೆ. ಚಮತ್ಕಾರಿಕವಾಗಿ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅವಕಾಶ ನಿಮ್ಮದಾಗಲಿದೆ. ಪ್ರಶಂಸೆಗೆ ಪಾತ್ರರಾಗುವಿರಿ.

ತುಲಾ:

ಮಹಿಳಾ ಉದ್ಯೋಗಿಗಳಿಗೆ ಪ್ರಗತಿ ತೋರಿ ಬರುತ್ತದೆ. ಹೊಸ ಮಿತ್ರರ ಸಮಾಗಮನ ಕಾರ್ಯಸಿದ್ಧಿಯಾಗಲಿದೆ. ಧಾರ್ಮಿಕ ಕಾರ್ಯಗಳಿಗೆ ವಿಳಂಬ ತಂದೀತು. ವಿದ್ಯಾರ್ಥಿಗಳಿಗೆ ಶುಭವಿದೆ. ಅಭಿರುಚಿಗೆ ತಕ್ಕಂತೆ ಸ್ವಾವಲಂಬಿ ಕಾರ್ಯಗಳಲ್ಲಿ ತೊಡಗುವಿರಿ. ಆದರ್ಶ ಹೊಂದಿದ ಕೆಲಸಕಾರ್ಯಗಳಿಗೆ ಸಹಾಯ ದೊರಕಿ ಕಾರ್ಯಸಾಧನೆ ಮಾಡಲಿದ್ದೀರಿ. ಘನತೆ ಗೌರವಗಳು ನಿಮ್ಮದಾಗಲಿವೆ.

ವೃಶ್ಚಿಕ :-

ಸದಾಚಾರ ಕಾರ್ಯಗಳಲ್ಲಿ ಸ್ವಸ್ಥ ಮನಸ್ಸಿನಿಂದ ತೊಡಗುವಿರಿ. ವೃತ್ತಿರಂಗದಲ್ಲಿ ಕಾರ್ಯಒತ್ತಡದಿಂದ ಮಾನಸಿಕ ಸಮಾಧಾನ ವಿರದು. ಧಾರ್ಮಿಕ ಕಾರ್ಯಗಳ ಚಿಂತನೆ ನಡೆಯಲಿದೆ. ಅಂತಃ ಶತ್ರುಗಳ ಕಾಟಗಳಿಂದ ಬರಬೇಕಾದ ಸಹಕಾರ ತಪ್ಪಿ ಹೋಗಲಿದೆ. ಮಿತ್ರರ ಮಧ್ಯಸ್ಥಿಕೆಯಲ್ಲಿ ಗಂಭೀರ ಸಮಾಲೋಚನೆ ನಡೆಯುವ ಸಾಧ್ಯತೆಯಿದ್ದು ಶುಭದಾಯಕವಾಗಿ ಪರಿಣಮಿಸಲಿದೆ. ಗಣಪತಿ ಆರಾಧನೆ ಶ್ರೇಷ್ಟ.

ಧನಸ್ಸು:

ಕೋರ್ಟು ಕಚೇರಿ ಕಾರ್ಯಗಳಲ್ಲಿ ಮುನ್ನಡೆ. ಆರೋಗ್ಯದ ಬಗ್ಗೆ ವಾಹನ ಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಮಿತ್ರರೋ ಬಂಧುಗಳ್ಳೋ ನಿಮ್ಮ ಪಾಲಿಗೆ ಹಿತವೆನಿಸಿಯಾರು. ನಿಮ್ಮ ವಿರುದ್ಧ ಪಿತೂರಿ ನಡೆಸುತ್ತಿರುವವರ ಬಣ್ಣ ಇಂದು ಬಯಲಾಗಲಿದೆ. ಮೇಧಾವಿ ತನದಿಂದಾಗಿ ಹಿತಕರ ವಾತಾವರಣ ನಿಮ್ಮದಾಗುವುದು. ಗೊಂದಲದ ನಿವಾರಣೆಗೆ ವೆಚ್ಚ ಮಾಡುವ ಸಾಧ್ಯತ

ಮಕರ :-

ಭರವಸೆಗಳ ಮಹಾಪೂರ ಹರಿದುಬಂದು ಸಂತೋಷ ಮೂಡುವುದು. ಪ್ರವಾಸದಿಂದ ಆರೋಗ್ಯ ಹದಗೆಟ್ಟರೂ ಸಮಸ್ಯೆ ಇರದು. ಕೆಲಸಕಾರ್ಯಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಇರದು. ಮಹತ್ಕಾರ್ಯವೊಂದರ ಚಿಂತನೆಗೆ ಇದು ಸಕಾಲವಲ್ಲ. ಸೇವಾಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಸವಾಲುಗಳು ಎದುರಾಗಲಿದ್ದು, ಮುನ್ನುಗ್ಗಿದರೆ ಯಶಸ್ಸು ನಿಮ್ಮದಾಗಲಿದೆ.

ಕುಂಭ:-

ಮನೆಯ ಸಾಮಗ್ರಿಗಳಿಗಾಗಿ ಧನವ್ಯಯ. ಹೊಂದಿಕೊಳ್ಳುವ ಮನೋಭಾವದಿಂದಾಗಿ ಮಹತ್ವದ ವಿಷಯಗಳಲ್ಲಿ ಒಡಂಬಡಿಕೆಗೆ ಬರುವ ಸಾಧ್ಯತೆ. ವಿಪರೀತ ಸನ್ನಿವೇಶಗಳು ಎದುರಾಗಬಹುದು. ಧಾರ್ಮಿಕ ವಿಷಯಗಳಲ್ಲಿ ಆಸಕ್ತಿಯ ಚರ್ಚೆ. ಸಾಂಸಾರಿಕವಾಗಿ ನೆಮ್ಮದಿ ತೋರಿ ಬಂದರೂ ನಿರೀಕ್ಷಿತ ಸಮಾಧಾನ ಸಿಗದು. ಹೊಸ ಉದ್ದಿಮೆಗೆ ಮನಸ್ಸು ಮಾಡಿದಲ್ಲಿ ಲಾಭ ವಿರುತ್ತದೆ.

ಮೀನ:-

ನಿಮ್ಮ ಬಹುದಿನಗಳ ಬಯಕೆ ಇಡೇರುವ ಸಾಧ್ಯತೆ. ವೃತ್ತಿಯಲ್ಲಿ ಬದಲಾವಣೆ ಸಾಧ್ಯತೆ. ಉತ್ತಮ ಕೆಲಸ ಕಾರ್ಯಗಳಿಂದಾಗಿ ಮನ್ನಣೆ ಗಳಿಸುವಿರಿ. ಮನೆಯವರ ಆರೋಗ್ಯದ ಬಗ್ಗೆ ನಿಗಾವಹಿಸಿ. ಸರಕಾರಿ ಕೆಲಸಕಾರ್ಯಗಳಿಗಾಗಿ ಓಡಾಟ ಹಾಗೂ ಧನವ್ಯಯವಾಗಲಿದೆ. ಗೃಹ ಸಂಬಂಧಿ ಕೆಲಸಕಾರ್ಯಗಳು ನಡೆಯಲಿವೆ. ಯೋಗ್ಯ ವಯಸ್ಕರಿಗೆ ಕಂಕಣಬಲದ ಅವಕಾಶಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ಸುದ್ದಿ

    MP ಪ್ರತಾಪ್ ಸಿಂಹರವರನ್ನು ಕಸ್ಟಡಿಗೆ ತೆಗೆದುಕೊಂಡ ಪೊಲೀಸರು!ಈ ಸುದ್ದಿ ನೋಡಿ…

    ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…