ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.
ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.
ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.
ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.
ಅಹಮದ್ ನಗರ ಜಿಲ್ಲೆಯ ಕೋಪರ್ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.
ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.
ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.
ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)

ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.

ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.
ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…