News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

3454

ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

ಅಂತಹವರಲ್ಲಿ ರಾಘವೇಂದ್ರ ಸ್ವಾಮಿಗಳು, ಶಂಕರಾಚಾರ್ಯರು ಹಾಗೂ ಇನ್ನೂ ಅನೇಕ ದೇವಾಂಶ ಸಂಭೂತರು ಸೇರಿದ್ದಾರೆ.ಅಂಥಹ ದೇವಾಂಶ ಸಂಭೂತರಲ್ಲಿ ಶ್ರೀ ಶಿರಡಿ ಸಾಯಿ ಬಾಬಾ ರವರು ಕೂಡ ಅಗ್ರಗಣ್ಯರು.

ತಮ್ಮ ಭಕ್ತರಿಂದ ಅವರವರ ವೈಯಕ್ತಿಕ ಒಲವುಗಳು ಹಾಗು ನಂಬಿಕೆಗಳ ಪ್ರಕಾರ ಒಬ್ಬ ಸಂತ, ಫಕೀರ, ಅವತಾರ ಅಥವಾ ಸದ್ಗುರು ಎಂದು ಪರಿಗಣಿಸಲಾಗಿದ್ದ ಮತ್ತು ಪರಿಗಣಿಸಲಾಗುವ ಒಬ್ಬ ಮಹಾನ್ ಆಧ್ಯಾತ್ಮಿಕ ಗುರುಗಳಾಗಿದ್ದರು. ಅವರು ತಮ್ಮ ಮುಸ್ಲಿಮ ಮತ್ತು ಹಿಂದೂ ಭಕ್ತರಿಂದ ಗೌರವಿಸಲ್ಪಡುತ್ತಿದ್ದರು.

ಗೋದಾವರಿ ತಟದ ಅಹಮದ್ ನಗರವು ಹಲವಾರು ಪುಣ್ಯ ಪುರುಷರಿಗೆ ಆಶ್ರಯಸ್ಥಾನವಾಗಿ ಪುಣ್ಯ ಸಂಪಾದಿಸಿದೆ. ಸಾಧು ಸಂತರು ಈ ಪ್ರದೇಶದಲ್ಲಿ ಅವತಾರವೆತ್ತಿ ಈ ಸ್ಥಳವನ್ನು ಪಾವನವಾಗಿಸಿದ್ದಾರೆ.

ಅಹಮದ್ ನಗರ ಜಿಲ್ಲೆಯ ಕೋಪರ್‌ಗಾಂವ್ ತಾಲೂಕಿನಲ್ಲಿದೆ ಶಿರಡಿ. ಗೋದಾವರಿ ನದಿ ದಾಟಿದ ತಕ್ಷಣವೇ ಮಾರ್ಗವು ನಮ್ಮನ್ನು ಶಿರಡಿ ಕ್ಷೇತ್ರಕ್ಕೆ ಕರೆದೊಯ್ಯುತ್ತದೆ. ಎಂಟು ಮೈಲು ಸಾಗಿದರೆ ನಾವು ನೀಮ್‌ಗಾಂವ್ ತಲುಪುತ್ತೇವೆ. ಅಲ್ಲಿಂದ ಶಿರಡಿಯ ವೈಭವವನ್ನು ಕಣ್ಣಾರೆ ಕಾಣಬಹುದಾಗಿದೆ. ಕೃಷ್ಣಾ ನದಿ ತಟದಲ್ಲಿ ಶಿರಡಿಯಂತೆಯೇ ಗಾಣಗಾಪುರ, ನರಸಿಂಹವಾಡಿ ಮತ್ತು ಔದುಂಬರ ಮೊದಲಾದ ಇತರ ತೀರ್ಥ ಕ್ಷೇತ್ರಗಳೂ ಇವೆ.

ಶ್ರೀ ಸಾಯಿಬಾಬಾ ಅವರ ಜನ್ಮತಿಥಿ, ಜನ್ಮಸ್ಥಾನ ಮತ್ತು ಅವರ ಹೆತ್ತವರ ಬಗ್ಗೆ ಯಾರಿಗೂ ತಿಳಿದಿಲ್ಲ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಬಾಬಾರಿಂದ ಮತ್ತು ಅವರ ಸಮೀಪವರ್ತಿಗಳಲ್ಲಿ ಈ ಕುರಿತು ಕೇಳಲಾಗಿತ್ತಾದರೂ, ಯಾವುದೇ ಫಲಪ್ರದ ಉತ್ತರ ದೊರೆತಿರಲಿಲ್ಲ. ಅದೇ ರೀತಿ ಸಾಯಿಬಾಬಾರನ್ನು ಸಂತ ಕಬೀರರ ಅವತಾರ ಎಂದೂ ಹೇಳುವವರಿದ್ದಾರೆ.

ಶ್ರೀ ಸಾಯಿಬಾಬಾ ಅವರ ಏಕೈಕ ಲಭ್ಯ ಜೀವನ ಚರಿತ್ರೆ “ಶ್ರೀ ಸಾಯಿ ಸತ್‌ಚರಿತೆ”ಯನ್ನು 1914ರಲ್ಲಿ ಶ್ರೀ ಅನ್ನಾ ಸಾಹೇಬ್ ಧಾಬೋಲ್ಕರ್ ಎಂಬವರು ಬರಹರೂಪಕ್ಕಿಳಿಸಿದ್ದರು.

ಒಂದು ನಂಬಿಕೆಯ ಪ್ರಕಾರ, ಮಹಾರಾಷ್ಟ್ರದ ಪರ್‌ಭನಿ ಜಿಲ್ಲೆಯ ಪಾಥರಿ ಎಂಬ ಗ್ರಾಮದಲ್ಲಿ ಸಾಯಿಬಾಬಾ ಅವರ ಜನನವು 1835ರಲ್ಲಿ ಆಯಿತು. (ಶಿರಡಿ ಸಾಯಿಬಾಬಾ ಅವರ ಜನನವು ಪಾಥರಿ ಗ್ರಾಮದಲ್ಲಿ 1830ರ ಡಿಸೆಂಬರ್ 27ರಂದು ಆಗಿತ್ತು ಎಂದು ಸತ್ಯ ಸಾಯಿಬಾಬಾ ಅವರು ಹೇಳಿದ್ದಾರೆ.)


ಮೂಲ
1835ರಿಂದ 1846ರವರೆಗಿನ 12 ವರ್ಷ ಪೂರ್ತಿ ಸಾಯಿಬಾಬಾ ಅವರು ತಮ್ಮ ಮೊದಲ ಗುರು ರೋಶನ್‌ಷಾ ಫಕೀರರ ನಿವಾಸದಲ್ಲೇ ಇದ್ದರು ಎಂದು ಹೇಳಲಾಗುತ್ತಿದೆ. ತದನಂತರ 1854ರವರೆಗೆ ಬಾಬಾ ಅವರು ಬೇಂಕುಷ್ ಆಶ್ರಮದಲ್ಲಿದ್ದರು ಎನ್ನಲಾಗುತ್ತಿದೆ.


ಮೂಲ
1858ರಿಂದ 1918ರ ಅಕ್ಟೋಬರ್ 15ರಂದು ದೇಹತ್ಯಾಗ ಮಾಡುವವರೆಗೂ ಬಾಬಾ ಅವರು ಶಿರಡಿಯಲ್ಲಿ ನೆಲೆನಿಂತು ತಮ್ಮ ಲೀಲೆಗಳಿಂದ ಭಗವದ್ಭಕ್ತರನ್ನು ಹರಸುತ್ತಿದ್ದರು.

ದೇವರಿದ್ದಾನೆ ಎಂದು ಜನತೆಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಬಾಬಾ ಅವರು ಹಲವಾರು ಪವಾಡಗಳನ್ನು ಮಾಡಿದರು. ರೋಗ ಶಮನಗೊಳಿಸಿದರು. ತಮ್ಮ ಭಕ್ತರಿಗೆ ನೈತಿಕ ಆತ್ಮಬಲ ಮತ್ತು ಭೌತಿಕ ಬಲವನ್ನು ಒದಗಿಸಿದರು. ಎಲ್ಲಾ ಸಮುದಾಯಗಳಲ್ಲಿ ಏಕತೆ ಮತ್ತು ಸೌಹಾರ್ದತೆ ಮೂಡಿಸಲು ಶ್ರಮಿಸಿದರು. ದೇವರೊಬ್ಬನೇ, ನಾಮ ಹಲವು ಎಂಬುದನ್ನ ಜನರಿಗೆ ಮನವರಿಕೆ ಮಾಡಿಸಲು ಪ್ರಯತ್ನಿಸಿದರು. ನಿಮ್ಮದೇ ಧರ್ಮ ಅನುಸರಿಸಿ, ಸತ್ಯ ದರ್ಶನವಾಗುತ್ತದೆ ಎಂದು ಬೋಧಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ  ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…