ಆರೋಗ್ಯ

ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

1566

ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ.  ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು  ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು  ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ.  ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ  ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…