News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

1579

ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ.  ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು  ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು  ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ.  ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ  ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • Cinema

    ಪ್ರಥಮ್ ಈಗ ಬಿಲ್ಡಪ್ ರಾಜ!ಈ ನನ್ಮಗಂದ್ ಇದೇ ಆಯ್ತು ಗುರೂ!ಶಾಕ್ ಆಗ್ಬೇಡಿ…ಈ ಲೇಖನಿ ಓದಿ…

    ನಮ್ಮ ಹಳ್ಳಿ ಹೈದ,ಬಿಗ್‌ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ.  ಇತ್ತೀಚೆಗಷ್ಟೇ ತಮ್ಮ ಬಿಗ್‌ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…