ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…