ಉಪಯುಕ್ತ ಮಾಹಿತಿ

ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

260

ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.

ಗೋವುಗಳ ಮಾರಾಟ ಆನ್ ಲೈನ್:-

ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್‌ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-

ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.

ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • inspirational

    ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಬಾಂಗ್ಲಾದೇಶ

    ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು. ಕ್ರಿಕೆಟ್‌ನಲ್ಲಿನ ಪವಾಡಗಳ  ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್‌ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್‌ನಲ್ಲಿ ಹೇಗೆ…

  • ಆರೋಗ್ಯ

    ಬೆಳ್ಳುಳ್ಳಿಯನ್ನು ತಿಂದರೆ ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಈ ಮಾಹಿತಿ ನೋಡಿ.

    ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • govt, Law, ಉಪಯುಕ್ತ ಮಾಹಿತಿ

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು!!!!

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006  ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್‌ನಲ್ಲಿ ದಾಖಲಿಸಬೇಕು. ಸಿಲಿಂಡರ್‌ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್‌ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…