ಶಿಕ್ಷಣ

ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

88

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:

ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:

ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:

ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ,  ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:

ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.

 

 

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಉಪಯುಕ್ತ ಮಾಹಿತಿ

    ರೇಷನ್ ಹಣದ Status Check ಮಾಡಲು ಈ ಲಿಂಕ್ ಮೂಲಕ ಪರೀಕ್ಷಿಸಿಕೊಳ್ಳಿ

    ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…

  • ಸ್ಪೂರ್ತಿ

    ಈಕೆಯ ಅತೀ ಉದ್ದವಾದ ಕೂದಲು ಗಿನ್ನಿಸ್ ದಾಖಲೆಗೆ ಸೇರಿದೆ..!ತಿಳಿಯಲು ಈ ಲೇಖನ ಓದಿ..

    ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…