ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.
ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.
ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.
ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.
ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿ ಅನೇಕ ದುಬಾರಿ ಕಾರುಗಳು ಮತ್ತು ಬೈಕ್ಗಳು ಇವೆ. ಆದರೂ ದರ್ಶನ್ ಲೂನಾ ಗಾಡಿಯಲ್ಲಿ ಸವಾರಿ ಮಾಡಿದ್ದಾರೆ. ನಟ ದರ್ಶನ್ ಅವರ ಪಾಲಿಗೆ ಈ ಲೂನಾ ಗಾಡಿ ಲಕ್ಕಿಯಾಗಿದೆ. ಯಾಕೆಂದರೆ ಈ ಲೂನಾ ಗಾಡಿಯನ್ನು ದರ್ಶನ್ ತಂದೆ ತೂಗುದೀಪ್ ಶ್ರೀನಿವಾಸ್ ಅವರು ಕೊಡಿಸಿದ್ದರು. ಹೀಗಾಗಿ ದರ್ಶನ್ ಇಂದಿಗೂ ಅಪ್ಪ ಕೊಡಿಸಿದ ಗಾಡಿನಾ ಜೋಪಾನವಾಗಿ ಕಾಪಾಡಿಕೊಂಡಿದ್ದಾರೆ. ದರ್ಶನ್ ನಟನಾಗಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಮೊದಲು ಲೈಟ್ ಬಾಯ್ ಆಗಿದ್ದರು. ಆಗ ಈ ಲೂನಾ ಗಾಡಿನಾ…
ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…