ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ಮದುವೆಯ ಪರ್ಫೆಕ್ಟ್ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…