ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್
ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:
ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:
ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:
ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ, ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:
ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ ಸಮರ್ಪಿಸಿದೆ….
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…