News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಶಿಕ್ಷಣ

ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

96

ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು 25 ಸಾವಿರ ಮಕ್ಕಳು ವ್ಯಾಸಂಗ ಮಾಡಲು 6 ಕಡೆಗಳಲ್ಲಿ ಶಾಲೆಗಳನ್ನು ನಿರ್ಮಿಸುತ್ತಿದ್ದಾರೆ.
ನಾನೂ ಸಹ ದೆಹಲಿಯಲ್ಲಿ ಸಾಕಷ್ಟು ಶಾಲೆಗಳನ್ನು ನೋಡಿದ್ದೇನೆ, ಖಾಸಗಿ ಶಾಲೆಗಳನ್ನು ಮೀರುವಷ್ಟು ಸರಕಾರಿ ಶಾಲೆಗಳು ಪರಿವರ್ತನೆಯಾಗಿವೆ. ಅದೇ ಮಾದರಿಯಲ್ಲಿ ಕೋಲಾರದಲ್ಲಿಯೂ ಸಹ ಶಾಲೆಗಳನ್ನು ನಿರ್ಮಿಸುವ ಸಂಕಲ್ಪವನ್ನು ಮಾಡಿರುವುದಾಗಿ ತಿಳಿಸಿದರು.

ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ:

ಕೇವಲ 120 ದಿನಗಳಲ್ಲಿ ನಾನು ಅಕಾರಕ್ಕೆ ಬರುತ್ತೇನೆ. ಶೇ.1೦೦ಕ್ಕೆ 1೦೦ ಕೋಲಾರ ನಗರದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸಮಗ್ರ ಅಭಿವೃದ್ಧಿಪಡಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ನನ್ನ ಕನಸು ಬೇರೆ ಇದೆ ಎಂದರು.
ಸರಕಾರಿ ಶಾಲಾ-ಕಾಲೇಜುಗಳನ್ನು ಮಾದರಿಯನ್ನಾಗಿ 1೦೦ಕ್ಕೆ 1೦೦ರಷ್ಟು ಉತ್ತೀರ್ಣತೆ ನೀಡುವುದರ ಜತೆಗೆ ಶೇ.7೦ಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಪಡೆದು ತೇರ್ಗಡೆಯಾಗುವಂತಹ ಸಂಕಲ್ಪವನ್ನು ಮಾಡುತ್ತೇವೆ. ವಿದ್ಯಾರ್ಥಿಗಳು ಕೇವಲ ಉತ್ತೀರ್ಣರಾದರೆ ಪ್ರಯೋಜನವಿಲ್ಲ. ಶೇ.7೦, 8೦, 9೦ ರಷ್ಟು ಅಂಕಗಳು ಬರಬೇಕು. ಒಳ್ಳೆಯ ದರ್ಜೆಯ ಶಿಕ್ಷಣಕ್ಕೆ ಏನು ಮಾಡಬೇಕು ಅದನ್ನು ನಾನು ಮಾಡುತ್ತೇನೆ ಎಂದರು.

ನಿಮ್ಮ ಭವಿಷ್ಯ ಪತ್ರಿಕೆಯಲ್ಲಿದೆ:

ನಿಮ್ಮ ಭವಿಷ್ಯ ಈ ಪತ್ರಿಕೆಯಲ್ಲಿ ಇದೆ. ಪಿಯುಸಿ ಬಳಿಕ ಪದವಿಗೆ ಹೋಗುತ್ತೀರಿ ಎಸ್ಸೆಸ್ಸೆಲ್ಸಿ, ಪಿಯುಸಿ ಅರ್ಹತೆಗೆ ಕೆಲವು ಉದ್ಯೋಗಗಳು ಬರುತ್ತವೆ. ಪದವಿ ಓದಲು ಸಾಧ್ಯವಾಗದವರು, ಬಡತನದಲ್ಲಿ ಇರುವವರಿಗೆ ಇದು ಅನುಕೂಲವಾಗಲಿದೆ, ಉದ್ಯೋಗ ಎಲ್ಲಿದೆ, ಯಾವ ಸಂಸ್ಥೆಯಲ್ಲಿ ಇದೆ ಎನ್ನುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದರ ಜತೆಗೆ ಮಾರ್ಗದರ್ಶನ ನೀಡಲು ಐಎಎಸ್, ಐಪಿಎಸ್ ಉತ್ತೀರ್ಣರಾದವರ ಸಂದರ್ಶನವನ್ನು ನೀಡಲಾಗುತ್ತದೆ.
ವಿದ್ಯಾರ್ಥಿಗಳು ಬೆಳಗ್ಗೆ 4 ಗಂಟೆಗೆ ಎದ್ದು ನಿತ್ಯಕರ್ಮಗಳನ್ನು ಮುಗಿಸಿ, 6 ಗಂಟೆಯವರೆಗೆ ಓದುತ್ತಿದ್ದರು. ನಂತರ ಸ್ನಾನ ಮಾಡಿ, ಸಿದ್ಧರಾಗಿ ಮುಂದಿನ ಕೆಲಸ ಕಾರ್ಯಗಳನ್ನು ಮಾಡಬೇಕು. ಮಧ್ಯಾಹ್ನ 1 ಗಂಟೆಗೆ ಊಟ ಮಾಡಬೇಕು. ರಾತ್ರಿ 7ಗಂಟೆಗೆ ಊಟ ಮಾಡಿ, ಓದಿಕೊಂಡು ೯ ಗಂಟೆಗೆ ಮಲಗಬೇಕು ಎನ್ನುವ ವಿಚಾರವು ಐಎಎಸ್ ಅಕಾರಿಯೊಬ್ಬರ ವಿದ್ಯಾರ್ಥಿ ಜೀವನದ ಬಗ್ಗೆ ಪರಿಚಯಿಸಿಕೊಂಡಾಗ ನನಗೆ ಗೊತ್ತಾಯಿತು, ನೀವು ಸಹ ನಿಷ್ಠೆಯಿಂದ ಪಾಲಿಸಿ ಐಎಎಸ್, ಐಪಿಎಸ್ ಅಕಾರಿಗಳಾಗಿ ಎಂದು ಆಶಿಸಿದರು.

ಕುಟುಂಬ ತುಪ್ಪದ ಅನ್ನ ತಿನ್ನಲಿ:

ವಾಟ್ಸ್ಆಫ್, ಟಿವಿ, ಧಾರವಾಹಿ ನೋಡುವುದರಿಂದ ಉದ್ಧಾರ ಆಗುವುದಿಲ್ಲ. ಲಕ್ಷಾಂತರ ಜನರಲ್ಲಿ ಸಾವಿರ ಮಂದಿಯೇ ಉತ್ತೀರ್ಣ ಆಗುವುದು, ಉಳಿದ 99 ಸಾವಿರ ಜನರು ಬೇಜವಾಬ್ದಾರಿ,  ಅನುತ್ತೀರ್ಣರಾಗುತ್ತಾರೆ. ಕೆಲವರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಉತ್ತೀರ್ಣ, ಅನುತ್ತೀರ್ಣರಾಗುತ್ತಾರೆ.
ಶ್ರದ್ಧೆ ಭಕ್ತಿಯಿಂದ ವಿದ್ಯಾಭ್ಯಾಸ ಮಾಡಿದರೆ ಇಡೀ ನಿಮ್ಮ ಕುಟುಂಬವೇ ತುಪ್ಪದ ಅನ್ನ ತಿನ್ನುತ್ತಾರೆ, ನೀವು ಬೇಜವಾಬ್ದಾರಿತನದಿಂದ ಓದಿದರೆ ಮಣ್ಣು ತಿನ್ನಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಎಲ್ಲದಕ್ಕಿಂತಲೂ ಮುಖ್ಯವಾಗಿರುವ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಸೂಕ್ತ ಬಹುಮಾನ-ಘೋಷಣೆ:

ಪತ್ರಿಕೆಗಳಲ್ಲಿ ಜಾಹಿರಾತು, ಉದ್ಯೋಗವಕಾಶ ಪ್ರತಿ ರಾಜಕೀಯ, ಆರ್ಥಿಕ ಸೇರಿದಂತೆ ಎಲ್ಲ ಕ್ಷೇತ್ರಗಳ ಬಗ್ಗೆ ಪತ್ರಿಕೆಯಲ್ಲಿ ಬರುತ್ತದೆ. ಪ್ರತಿದಿನವೂ ಪತ್ರಿಕೆ ಓದಿದ ಬಳಿಕ ಶಾಲೆಗೆ ಬರುತ್ತದೆ. ಇಲ್ಲಿ ಉಚಿತವಾಗಿ ನಾನು ನೀಡಿರುವ ಪತ್ರಿಕೆಯನ್ನು ಪ್ರತಿದಿನವೂ ನಿಮ್ಮ ಕಾಲೇಜಿಗೆ ತಲುಪಿಸಲಾಗುತ್ತದೆ ಅದನ್ನು ಪಡೆದುಕೊಂಡು ಸಂಜೆ ಮನೆಗೆ ಹೋಗಿ ಓದಬೇಕು. ನಿಮ್ಮ ಭವಿಷ್ಯವೇ ಪತ್ರಿಕೆಯಲ್ಲಿ ಅಡಗಿರುತ್ತದೆ. ೧೨೦ ದಿನಗಳ ಕಾಲ ನೀವು ಭದ್ರವಾಗಿ ಪತ್ರಿಕೆಗಳನ್ನು ಇಟ್ಟುಕೊಂಡು ಕೊನೆಯದಾಗಿ ತಂದು ತೋರಿಸಿದರೆ ಸೂಕ್ತ ಬಹುಮಾನ ನೀಡುವುದಾಗಿಯೂ ವರ್ತೂರು ಪ್ರಕಾಶ್ ಘೋಷಿಸಿದರು.

 

 

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಮಜಾಟಾಕೀಸ್ ಅಂತೂ ಬೇಡವೇ ಬೇಡ, ಕಾಮಿಡಿ ಚಿತ್ರಗಳಿಂದ ಬಹುದೂರ ಉಳಿದ ಅಪರ್ಣಾ.

    ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್‌ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ  ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…