ಜೀವನಶೈಲಿ

ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

3741

ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು  ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

ವೈದ್ಯರು ಪ್ರಕಾರ ಸಾಮಾನ್ಯವಾಗಿ ಕಾಡುವ ನಿದ್ರಾಹೀನತೆಯಿಂದ ಭವಿಷ್ಯದಲ್ಲಿ ಮಾರಕ ಆರೋಗ್ಯ ದುಷ್ಪರಿಣಾಮಗಳು ಎದುರಾಗುತ್ತವೆ…

ನಿದ್ದೆಗೆಡುವುದರಿಂದ ಏನೆಲ್ಲಾ ಆಗುತ್ತದೆ ಗೊತ್ತಾ ?

ಕೆಲುವು ವರದಿಗಳ ಪ್ರಕಾರ  ದೀರ್ಘಕಾಲದ ನಿದ್ರಾಹೀನತೆಯಿಂದಾಗಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ಹೇಳಲಾಗಿದೆ. ಅಂತೆಯೇ ಪುರುಷರಿಂಗಿಂತ  ಹೆಚ್ಚಾಗಿ ಮಹಿಳೆಯರಿಗೇ ನಿದ್ರಾ ಹೀನತೆಯಿಂದ ಎದುರಾಗುವ ದುಷ್ಪರಿಣಾಮಗಳ ಅಪಾಯ ಹೆಚ್ಚಿದ್ದು, ಪುರುಷರಿಗಿಂತ ಬೇಗನೇ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ವೈದ್ಯರು  ಅಭಿಪ್ರಾಯಪಟ್ಟಿದ್ದಾರೆ.

ಇವು ನಿದ್ರಾ ಹೀನತೆಯ ಲಕ್ಷಣಗಳು :-

ಪದೇ ಪದೇ ಆನಾರೋಗ್ಯಕ್ಕೀಡಾಗುವವರಿಗಿಂತಲೂ, ನಿದ್ರಾಹೀನತೆಯಿಂದ ಬಳಲುತ್ತಿರುವವರಲ್ಲೇ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ತೀರಾ ತಡವಾಗಿ ನಿದ್ರೆ ಬರುವುದು, ಅರೆ ನಿದ್ರೆಯಲ್ಲೇ  ಎಚ್ಚರವಾಗುವುದು, ಸಮಾಧಾನಕರವಲ್ಲದ ನಿದ್ರೆ ಮತ್ತು ಅಗತ್ಯಕ್ಕಿಂತ ಮೊದಲೇ ಅಂದರೆ ಮುಂಜಾನೆಯೇ ಎಚ್ಚರವಾಗುವುದು ಇವೆಲ್ಲವೂ ನಿದ್ರಾ ಹೀನತೆಯ ಲಕ್ಷಣಗಳು ಎಂದು ವೈದ್ಯರು ಹೇಳಿದ್ದಾರೆ.

ನಿದ್ರಾಹೀನತೆಯನ್ನು ಕಂಡುಹಿಡಿದದ್ದು ಹೇಗೆ ಗೊತ್ತಾ ?

ಸುಮಾರು 160, 867 ಮಂದಿಯ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಶೇ.27ರಷ್ಟು ಮಂದಿ ತಡವಾಗಿ ನಿದ್ರೆ ಮಾಡುವ ಅಭ್ಯಾಸ ಹೊಂದಿದ್ದು, ಶೇ.11ರಷ್ಟು ಮಂದಿಯಲ್ಲಿ ನಿದ್ರೆ ಮಧ್ಯೆ ಎಚ್ಚರವಾಗುವ  ಸಮಸ್ಯೆ ಕಂಡು ಬಂದಿದೆ. ಅಂತೆಯೇ ಶೇ.18ರಷ್ಟು ಮಂದಿಯಲ್ಲಿ ಅಗತ್ಯಕ್ಕೂ ಮೊದಲೇ ನಿದ್ರೆಯಿಂದ ಎಚ್ಚರವಾಗುವ ಸಮಸ್ಯೆ ಹೊಂದಿದ್ದಾರೆ. ಇಂತಹವರಲ್ಲಿ ಅತೀ ಬೇಗನೇ ಹೃದಯಾಘಾತವಾಗುವ ಅಪಾಯವಿದ್ದು, ಪಾರ್ಶ್ವವಾಯು  ಸಂಭವ ಕೂಡ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿದ್ದೆಗೆಡುವುದು ಹೃದಯಾಘಾತಕ್ಕೆ ಕಾರಣವಾಗಿ ಬಳಿಕ ಸಾವು ಕೂಡ ಸಂಭವಿಸಬಹುದು ಎಂದು ಹೇಳಿದ್ದಾರೆ. ಅಂತೆಯೇ ಅತೀ ಕಡಿಮೆ ನಿದ್ರೆ ನಮ್ಮ ಮೆದುಳಿನ ಮೇಲೂ ಅಗಾಧ ದುಷ್ಪರಿಣಾಮ ಬೀರಿ ಪಾರ್ಶ್ವವಾಯುವಿಗೆ ದಾರಿ  ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಗಾದರೆ, ನೀವೇನಾದರೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದಾರೆ  ಆದಷ್ಟು ಬೇಗ ವೈದ್ಯರನ್ನು ಕಂಡು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬ್ಯಾಂಕ್ ಅಕೌಂಟ್, ಮೊಬೈಲ್ ಸಂಪರ್ಕಕ್ಕೆ ಇನ್ನುಮುಂದೆ ಇದು ಬೇಕಾಗಿಲ್ಲ..!

    ಮೊಬೈಲ್ ಸಿಮ್ ಪಡೆಯುವುದಕ್ಕಾಗಲಿ, ಯಾವುದೇ ಬ್ಯಾಂಕ್ ಗಳಲ್ಲಿ ಅಕೌಂಟ್ ತೆರೆಯಲು ಆಧಾರ್ ಅವಶ್ಯಕವಾಗಿತ್ತು. ಇದರ ಬಗ್ಗೆ ಅನೇಕ ಗೊಂದಲಗಳು ಕೂಡ ಇದ್ದವು. ಆದರೆ ಈಗ ಆಧಾರ್ ಕಡ್ಡಾಯ ಕುರಿತಂತೆ ಇದ್ದ ನಾನಾ ಗೊಂದಲಗಳಿಗೆ ತೆರೆ ಎಳೆಯಲಾಗಿದೇ. ಇನ್ಮುಂದೆ ಬ್ಯಾಂಕ್ ಖಾತೆ ಮಾಡಿಸುವುದಕ್ಕಾಗಲಿ ಅಥವಾ ಮೊಬೈಲ್ ಸಂಪರ್ಕಗಳಿಗೆ ಆಧಾರ್ ಕಡ್ಡಾಯವಲ್ಲ. ಹೌದು, ಆಧಾರ್ ಕುರಿತಂತೆ ಈಗ ಇರುವ ಕಾನೂನಿಗೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ಇನ್ಮುಂದೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಉಪಯುಕ್ತ ಮಾಹಿತಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ..!ತಿಳಿಯಲು ಈ ಲೇಖನ ಓದಿ ..

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.

  • ಸುದ್ದಿ

    ಬಿಹಾರ ರೈತರ ನಿದ್ದೆಗೆಡಿಸಿದ ಬಾನುಗಲ್ಲು….! ಕಾರಣ ಏನು?

    ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್‌ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…