News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

3756

ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು  ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

ವೈದ್ಯರು ಪ್ರಕಾರ ಸಾಮಾನ್ಯವಾಗಿ ಕಾಡುವ ನಿದ್ರಾಹೀನತೆಯಿಂದ ಭವಿಷ್ಯದಲ್ಲಿ ಮಾರಕ ಆರೋಗ್ಯ ದುಷ್ಪರಿಣಾಮಗಳು ಎದುರಾಗುತ್ತವೆ…

ನಿದ್ದೆಗೆಡುವುದರಿಂದ ಏನೆಲ್ಲಾ ಆಗುತ್ತದೆ ಗೊತ್ತಾ ?

ಕೆಲುವು ವರದಿಗಳ ಪ್ರಕಾರ  ದೀರ್ಘಕಾಲದ ನಿದ್ರಾಹೀನತೆಯಿಂದಾಗಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ಹೇಳಲಾಗಿದೆ. ಅಂತೆಯೇ ಪುರುಷರಿಂಗಿಂತ  ಹೆಚ್ಚಾಗಿ ಮಹಿಳೆಯರಿಗೇ ನಿದ್ರಾ ಹೀನತೆಯಿಂದ ಎದುರಾಗುವ ದುಷ್ಪರಿಣಾಮಗಳ ಅಪಾಯ ಹೆಚ್ಚಿದ್ದು, ಪುರುಷರಿಗಿಂತ ಬೇಗನೇ ಮಹಿಳೆಯರಲ್ಲಿ ಹೃದಯಾಘಾತ, ಪಾರ್ಶ್ವವಾಯು ಸಂಭವ ಹೆಚ್ಚು ಎಂದು ವೈದ್ಯರು  ಅಭಿಪ್ರಾಯಪಟ್ಟಿದ್ದಾರೆ.

ಇವು ನಿದ್ರಾ ಹೀನತೆಯ ಲಕ್ಷಣಗಳು :-

ಪದೇ ಪದೇ ಆನಾರೋಗ್ಯಕ್ಕೀಡಾಗುವವರಿಗಿಂತಲೂ, ನಿದ್ರಾಹೀನತೆಯಿಂದ ಬಳಲುತ್ತಿರುವವರಲ್ಲೇ ಹೆಚ್ಚಾಗಿ ಪಾರ್ಶ್ವವಾಯು ಮತ್ತು ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ತೀರಾ ತಡವಾಗಿ ನಿದ್ರೆ ಬರುವುದು, ಅರೆ ನಿದ್ರೆಯಲ್ಲೇ  ಎಚ್ಚರವಾಗುವುದು, ಸಮಾಧಾನಕರವಲ್ಲದ ನಿದ್ರೆ ಮತ್ತು ಅಗತ್ಯಕ್ಕಿಂತ ಮೊದಲೇ ಅಂದರೆ ಮುಂಜಾನೆಯೇ ಎಚ್ಚರವಾಗುವುದು ಇವೆಲ್ಲವೂ ನಿದ್ರಾ ಹೀನತೆಯ ಲಕ್ಷಣಗಳು ಎಂದು ವೈದ್ಯರು ಹೇಳಿದ್ದಾರೆ.

ನಿದ್ರಾಹೀನತೆಯನ್ನು ಕಂಡುಹಿಡಿದದ್ದು ಹೇಗೆ ಗೊತ್ತಾ ?

ಸುಮಾರು 160, 867 ಮಂದಿಯ ಮೇಲೆ ನಡೆಸಲಾದ ಪರೀಕ್ಷೆಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, ಶೇ.27ರಷ್ಟು ಮಂದಿ ತಡವಾಗಿ ನಿದ್ರೆ ಮಾಡುವ ಅಭ್ಯಾಸ ಹೊಂದಿದ್ದು, ಶೇ.11ರಷ್ಟು ಮಂದಿಯಲ್ಲಿ ನಿದ್ರೆ ಮಧ್ಯೆ ಎಚ್ಚರವಾಗುವ  ಸಮಸ್ಯೆ ಕಂಡು ಬಂದಿದೆ. ಅಂತೆಯೇ ಶೇ.18ರಷ್ಟು ಮಂದಿಯಲ್ಲಿ ಅಗತ್ಯಕ್ಕೂ ಮೊದಲೇ ನಿದ್ರೆಯಿಂದ ಎಚ್ಚರವಾಗುವ ಸಮಸ್ಯೆ ಹೊಂದಿದ್ದಾರೆ. ಇಂತಹವರಲ್ಲಿ ಅತೀ ಬೇಗನೇ ಹೃದಯಾಘಾತವಾಗುವ ಅಪಾಯವಿದ್ದು, ಪಾರ್ಶ್ವವಾಯು  ಸಂಭವ ಕೂಡ ಹೆಚ್ಚಿರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ನಿದ್ದೆಗೆಡುವುದು ಹೃದಯಾಘಾತಕ್ಕೆ ಕಾರಣವಾಗಿ ಬಳಿಕ ಸಾವು ಕೂಡ ಸಂಭವಿಸಬಹುದು ಎಂದು ಹೇಳಿದ್ದಾರೆ. ಅಂತೆಯೇ ಅತೀ ಕಡಿಮೆ ನಿದ್ರೆ ನಮ್ಮ ಮೆದುಳಿನ ಮೇಲೂ ಅಗಾಧ ದುಷ್ಪರಿಣಾಮ ಬೀರಿ ಪಾರ್ಶ್ವವಾಯುವಿಗೆ ದಾರಿ  ಮಾಡುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಾಗಾದರೆ, ನೀವೇನಾದರೂ ನಿದ್ರಾ ಹೀನತೆಯಿಂದ ಬಳಲುತ್ತಿದ್ದಾರೆ  ಆದಷ್ಟು ಬೇಗ ವೈದ್ಯರನ್ನು ಕಂಡು ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ