ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…