ಕರ್ನಾಟಕದ ಸಾಧಕರು

ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

260

ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ವಿದ್ಯಾಭ್ಯಾಸ

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆ ಅಂತರಾಷ್ಟ್ರೀಯ ಮಟ್ಟದಲ್ಲಿ…

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್‍ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ನಿನ್ನ ಪೂಜೆಗೆ ಬಂದೆ ಮಾದೇಶ್ವರಾ…

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಭರತನಾಟ್ಯ ಪ್ರವೀಣ…

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.

ಒಬ್ಬ ಆಧುನಿಕ ಶೈಲಿಯ ಗಾಯಕ ಗೇಲಿ ಮಾಡಿದ್ದೇ ಇವತ್ತಿನ ಯಶಸ್ಸಿಗೆ ಕಾರಣ…

ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್‌ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.

ವಿದೇಶದ ಒಂದು ಸನ್ನಿವೇಶ

ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು  ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ದಿ ರಘು ದೀಕ್ಷಿತ್ ಪ್ರಾಜೆಕ್ಟ್

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

ಅವರ ಮೊದಲ ಆಲ್ಬಮ್

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್‌ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.

ಕೃಪೆ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…