ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.
ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.
ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..