News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕದ ಸಾಧಕರು

ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

266

ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ವಿದ್ಯಾಭ್ಯಾಸ

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆ ಅಂತರಾಷ್ಟ್ರೀಯ ಮಟ್ಟದಲ್ಲಿ…

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್‍ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ನಿನ್ನ ಪೂಜೆಗೆ ಬಂದೆ ಮಾದೇಶ್ವರಾ…

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಭರತನಾಟ್ಯ ಪ್ರವೀಣ…

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.

ಒಬ್ಬ ಆಧುನಿಕ ಶೈಲಿಯ ಗಾಯಕ ಗೇಲಿ ಮಾಡಿದ್ದೇ ಇವತ್ತಿನ ಯಶಸ್ಸಿಗೆ ಕಾರಣ…

ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್‌ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.

ವಿದೇಶದ ಒಂದು ಸನ್ನಿವೇಶ

ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು  ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ದಿ ರಘು ದೀಕ್ಷಿತ್ ಪ್ರಾಜೆಕ್ಟ್

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

ಅವರ ಮೊದಲ ಆಲ್ಬಮ್

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್‌ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.

ಕೃಪೆ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಟ ರಾಪ್ಟ್ರೀಯವಾದಿ,ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಇನ್ನಿಲ್ಲ….!

    ಬಿಜೆಪಿ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೋದಿ ಸಂಪುಟದಿಂದಲೂ ಹೊರಗೆ ಉಳಿದಿದ್ದರು.ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣಕ್ಕೆ ಮೋದಿ ಸಂಪುಟದಿಂದಲೂ ಸ್ವರಾಜ್  ಹೊರಗೆ ಉಳಿದಿದ್ದರು. 1952 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ  67 ವರ್ಷ ವಯಸ್ಸಾಗಿತ್ತು. 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಏರಿದಾಗ ಕ್ಯಾಬಿನೆಟ್ ನಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ…

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ವಿಸ್ಮಯ ಜಗತ್ತು

    ಇದು ಮನುಕುಲದ ಅಚ್ಚರಿ.!ನಂಬ್ಲೆಬೇಕು!ಮೊಟ್ಟೆಗಳನ್ನು ಹಾಕಿದ 14 ವರ್ಷದ ಬಾಲಕ..!ಆ ಮೊಟ್ಟೆಗಳು ಹೇಗಿವೆ ಗೊತ್ತಾ.?ಈ ಲೇಖನ ಓದಿ ಶಾಕ್ ಹಾಗ್ತೀರಾ…

    ಹೌದು, ನೀವು ಕೇಳಿದ್ದು ನಿಜ…ಈ ಜಗತ್ತಿನಲ್ಲಿ ಏನೆಲ್ಲಾ ವಿಸ್ಮಯ ಅಚ್ಚರಿಗಳು ನಡೆಯುತ್ತವೆ ಎಂಬುದಕ್ಕೆ ಇದು ಒಂದು ಉದಾಹರಣೆಯಾಗಿದೆ.ನಾವೆಲ್ಲಾ ಕೋಳಿ,ಪಕ್ಷಿಗಳು,ಹಾವುಗಳು ಹಾಗೂ ಕೆಲವೊಂದು ಜೀವಿಗಳು ಮೊಟ್ಟೆ ಇಡುವುದನ್ನು ಕೇಳಿದ್ದೇವೆ.ಆದರೆ ಮನುಷ್ಯ ಮೊಟ್ಟೆ ಇದುತ್ತಾನೆಂದ್ರೆ ಇದು ಎಂತಹವರಿಗೂ ನಂಬೋದಕ್ಕೆ ಅಸಾಧ್ಯ ಆಲ್ವಾ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸುದ್ದಿ

    ರೈತ ಯುವಕನನ್ನು ಮಾಡುವೆ ಆಗೋ ಹುಡುಗಿಗೆ ಸಿಗಲಿದೆ ಒಂದು ಲಕ್ಷ ಬಂಪರ್ ಆಫರ್..!

    ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ  ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ  ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…