News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕರ್ನಾಟಕದ ಸಾಧಕರು

ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

266

ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ…

ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ…

ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್ ಮತ್ತು ತಾಯಿ ಮಾಲಿನಿಯವರ ಪುತ್ರ.ಇವರ ಸಹೋದರ ವಾಸು ದೀಕ್ಷಿತ್.ಇವರ ಪತ್ನಿ ಕನ್ನಡದ ಮಯೂರಿ ಉಪಾಧ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿಕೊಂಡಿರುವ ನೃತ್ಯ ಸಂಯೋಜಕಿ.

ವಿದ್ಯಾಭ್ಯಾಸ

ರಘು, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಜೈವರಸಾಯನಿಕಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಗಳಿಸಿ, ಭರತನಾಟ್ಯದಲ್ಲಿ ವಿದ್ವತ್ ಪರೀಕ್ಷೆಯಲ್ಲೂ ತೇರ್ಗಡೆಯಾದರು. ಸ್ವಲ್ಪ ಸಮಯ ಬಹುರಾಷ್ಟ್ರೀಯ ಕಂಪೆನಿಯೊಂದರಲ್ಲಿ ದುಡಿದರು. ಮುಂದೆ ಅದೆಲ್ಲವನ್ನು ಬಿಟ್ಟು ಈಗ ಸಂಗೀತಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಂಡಿದ್ದಾರೆ… ತಮ್ಮ ಅನುಪಮ ಸಾಧನೆಯಿಂದ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹು ಭರವಸೆಯ ಹೊಸ ಸಂಗೀತಗಾರ ಎಂದು ಗುರುತಿಸಲ್ಪಟ್ಟಿದ್ದಾರೆ.

ಸಂಗೀತ ಕ್ಷೇತ್ರದಲ್ಲಿ

ರಘು ದೀಕ್ಷಿತ್ ಪ್ರಾರಂಭದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಹಾಡುಗಳನ್ನು ನುಡಿಸುತ್ತಿದ್ದರು. ಒಮ್ಮೆ ವಿದೇಶಿಯರೊಬ್ಬರು ಇಂಗ್ಲೀಷಿನಲ್ಲಿ ಬರೆಯುವ ಬದಲು ಮಾತೃಭಾಷೆಯಲ್ಲಿ ಬರೆಯಲು ಸಲಹೆ ಕೊಟ್ಟಮೇಲೆ ರಘು ಕನ್ನಡದಲ್ಲಿ ಬರೆಯಲು ಪ್ರಾರಂಭಿಸಿದರು. ಹಾಗೆಯೇ ಮುಂದುವರೆದು ಹಿಂದಿಯನ್ನೂ ಸೇರಿಸಿಕೊಂಡರು.

ಕನ್ನಡ ಭಾಷೆ ಅಂತರಾಷ್ಟ್ರೀಯ ಮಟ್ಟದಲ್ಲಿ…

ಕನ್ನಡ ಭಾಷೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ತೆಗೆದುಕೊಂಡು ಹೋಗಿ ಅಲ್ಲಿನ ಸಭಿಕರಿಗೆ ಪ್ರಸ್ತುತಪಡಿಸಿದ ಖ್ಯಾತಿ ರಘು ದೀಕ್ಷಿತ್‍ರಿಗೆ ಸೇರಬೇಕು. ವಿದೇಶಗಳನ್ನು ಬೆಟ್ಟಿಯಾದಾಗ ಅಲ್ಲಿ ಕನ್ನಡ ಭಾಷೆಯ ಹಾಡನ್ನು ಪ್ರಸ್ತುತಪಡಿಸುತ್ತಿದ್ದರು. ಇಂದಿನ ಯುವ ಪೀಳಿಗೆಯವರಿಗೆ ತುಂಬ ಅಚ್ಚುಮೆಚ್ಚಿನ ಗಾಯಕ ರಘು ದೀಕ್ಷಿತ್.

ನಿನ್ನ ಪೂಜೆಗೆ ಬಂದೆ ಮಾದೇಶ್ವರಾ…

ಸೈಕೋ ಚಿತ್ರದಲ್ಲಿ ಅವರು ಸಂಗೀತ ನೀಡಿ ಹಾಡಿದ “ನಿನ್ನ ಪೂಜೆಗೆ ಬಂದೆ” ಹಾಡು ಅತ್ಯಂತ ಜನಪ್ರಿಯತೆಯನ್ನು ಗಳಿಸಿದೆ. ಕನ್ನಡಿಗರು ತೊಡುವ ಲುಂಗಿಯನ್ನೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಶ್ರೇಯಸ್ಸು ಅವರದು. ಟ್ವಿಟ್ಟರ್ ಜಾಲತಾಣದಲ್ಲಿ ತುಂಬ ಚಟುವಟಿಕೆಯಿಂದಿರುತ್ತಾರೆ.

ಭರತನಾಟ್ಯ ಪ್ರವೀಣ…

ಎಷ್ಟೋ ಜನರಿಗೆ ಗೊತ್ತಿಲ್ಲದ ವಿಷಯ ಅಂದ್ರೆ, ಗಾಯಕರಾಗುವ ಮುನ್ನ ರಘು ದೀಕ್ಷಿತ್ ಡ್ಯಾನ್ಸರ್ ಆಗಿದ್ದರು. ಭರತನಾಟ್ಯದಲ್ಲಿ ವಿದ್ವತ್ ಪಡೆದಿರುವ ಪ್ರತಿಭಾವಂತ ಕಲಾವಿದ ರಘು ದೀಕ್ಷಿತ್.ನಂದಿನೀಶ್ವರ್ ಅವರ ನೃತ್ಯ ಗುರು.

ಒಬ್ಬ ಆಧುನಿಕ ಶೈಲಿಯ ಗಾಯಕ ಗೇಲಿ ಮಾಡಿದ್ದೇ ಇವತ್ತಿನ ಯಶಸ್ಸಿಗೆ ಕಾರಣ…

ರಘು, ಒಮ್ಮೆ, ಮೈಸೂರಿನ ಯುವರಾಜ ಕಾಲೇಜಿನಲ್ಲಿ ಎರಡನೆ ವರ್ಷ ಬಿಎಸ್‌ಸಿ ಓದುತ್ತಿರುವಾಗ, ಭರತನಾಟ್ಯ ಕಾರ್ಯಕ್ರಮ ನೀಡಿ, ವೇಷ ಕಳಚುತ್ತಿರುವಾಗ, ಆಧುನಿಕ ಶೈಲಿಯ ಒಬ್ಬ ಗಾಯಕ ಅವರನ್ನು ಗೇಲಿ ಮಾಡಿದ. ಸಂಗೀತ ಪ್ರಿಯರನ್ನು ಆಕರ್ಶಿಸುವ ಬಗ್ಗೆ ಒಂದು ಚಿಕ್ಕ ಉಪನ್ಯಾಸ ಕೊಟ್ಟ. ಈ ಪಾಠದಿಂದ ರಘು ದೀಕ್ಷಿತ್, ವಿಚಲಿತರಾಗಲಿಲ್ಲ.

ಶಾಸ್ತ್ರೀಯ ನಾಟ್ಯ ಬಗ್ಗೆ ಅಪಾರ ಅಭಿಮಾನವಿದ್ದ ರಘು ಗಿಟಾರ್ ಸಂಗೀತ ಕಲಿತು ಮೇಟಿಯಾಗಿ ಹೊಸಸವಾಲನ್ನು ಎದುರಿಸುವುದಾಗಿ ಶಪಥಮಾಡಿದರು. ಈ ಪ್ರಸಂಗನ್ನು ಸೀರಿಯಸ್ ಆಗಿ ತೆಗೆದುಕೊಂಡು ಗಿಟಾರ್ ಕಲಿತರು. ಗಿಟಾರ್ ನುಡಿಸುತ್ತ, ಅವರು ಕಂಡುಕೊಂಡ ಸತ್ಯವೆಂದರೆ, ಅದರಲ್ಲಿರುವ ಸ್ವಾತಂತ್ರ್ಯ ಶಾಸ್ತ್ರೀಯದಲ್ಲಿ ಇಲ್ಲವೆನ್ನಿಸಿತು. ಇಲ್ಲಿ ಹೇಗೆ ಬೇಕಾದರೂ, ಏನು ಬೇಕಾದರೂ ಹಾಡಬಹುದು; ಇಷ್ಟ ಬಂದ ಸಾಹಿತ್ಯವನ್ನು ನಾವೇ ಬರೆದುಕೊಂಡು ನಮಗಿಷ್ಟ ಬಂದಂತೆ ಹಾಡಬಹುದು. ಹೀಗಾಗಿ ಸುಮಾರು ವರ್ಷಗಳ ಅವರೇ ಇಂಗ್ಲೀಷಿನಲ್ಲಿ ಸಾಹಿತ್ಯ ಬರೆಯುವುದರ ಜೊತೆಗೆ ಹಾಡುತ್ತಲಿದ್ದರು. ಗಿಟಾರ್ ನಲ್ಲಿ ಆ ಹಾಡುಗಳನ್ನು ನುಡಿಸುತ್ತಿದ್ದರು.

ವಿದೇಶದ ಒಂದು ಸನ್ನಿವೇಶ

ಬೆಲ್ಜಿಯಂನಲ್ಲಿ ಫಾರ್ಮಸ್ಯೂಟಿಕಲ್ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಇದ್ದಾಗ ಒಂದು ಕಡೆ ಪೇಯಿಂಗ್ ಗೆಸ್ಟ್ ಆಗಿದ್ದಾಗ ಆ ಮನೆಯ ಯಜಮಾನ ರಘುರವರ ಹಾಡುವುದನ್ನು ಮೆಚ್ಚಿಕೊಂಡು ಅಲ್ಲಿಯ ಒಂದು ರೇಡಿಯೋ ಕೇಂದ್ರದಲ್ಲಿ ಹಾಡಲು ಅವಕಾಶ ಮಾಡಿಸಿಕೊಟ್ಟರು. ಅಲ್ಲಿನ ಜನ ಅದನ್ನು ತುಂಬ ಮೆಚ್ಚಿಕೊಂಡರು. ಯಾವುದೋ ಒಂದು ದೇಶದಲ್ಲಿ, ನಮ್ಮ ಭಾಷೆಯೇ ಅರ್ಥವಾಗದಿದ್ದರೂ ಜನ ನನ್ನ ಹಾಡನ್ನು ಮೆಚ್ಚಿಕೊಳ್ಳಬೇಕಾದರೆ, ನಮ್ಮ ದೇಶದಲ್ಲಿ ನಮ್ಮ ಭಾಷೆಯಲ್ಲಿ ಏಕೆ ಹಾಡಬಾರದೆನ್ನುವ ಆಲೋಚನೆ ಅವರ ತಲೆಯಲ್ಲಿ ಸುಳಿಯಿತು. ಆದರೆ ಜನಪ್ರಿಯತೆ ಪಡೆಯಲು  ಅವರು ಸುಮಾರು 6 ವರ್ಷಗಳ ಕಾಲ ಕಷ್ಟಪಡಬೇಕಾಯಿತು.ಅನಂತರ ನಡೆದದ್ದೇ ಇತಿಹಾಸ.

ದಿ ರಘು ದೀಕ್ಷಿತ್ ಪ್ರಾಜೆಕ್ಟ್

ರಘು ದೀಕ್ಷಿತ್’ರವರು “ದಿ ರಘು ದೀಕ್ಷಿತ್ ಪ್ರಾಜೆಕ್ಟ್” ತಮ್ಮದೇ ಆದ ಒಂದು ಸಂಸ್ಥೆಯನ್ನು ಹುಟ್ಟುಹಾಕಿ, ಸಂಗೀತವನ್ನು ಪ್ರಪಂಚಾದ್ಯಂತ, ಹಲವಾರು ದೇಶಗಳಲ್ಲಿ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.ಇವರು ಹಾಡು ಹಾಡಬೇಕಾದ್ರೆ ಲುಂಗಿ ಮೇಲೆ ಟೀ ಶರ್ಟ್ ಧರಿಸುತ್ತಾರೆ.

ಅವರ ಮೊದಲ ಆಲ್ಬಮ್

2007ರಲ್ಲಿ ಮೊದಲ ಆಲ್ಬಂ ಬಂದರೂ ಜನಕ್ಕೆಲ್ಲ ಗೊತ್ತಾಗಿದ್ದು ಎರಡು ವರ್ಷಗಳ ಬಳಿಕ. ಸಿನಿಮಾದಲ್ಲಿ ಹಾಡಿದ ಮೇಲೆಯೇ ಜನರನ್ನು ತಲುಪಲು ಸಾಧ್ಯವಾಗಿದ್ದು. ಸಾಂಗ್‌ಲೈನ್ಸ್ ಪ್ರಶಸ್ತಿ ಬಂದರೂ ಸಿನಿಮಾದ ಮೂಲಕವೇ ಹೆಚ್ಚು ಬೆಳಕಿಗೆ ಬಂದಿದ್ದು. ಕನ್ನಡಿಗರು ಯಾರೂ ಗಮನಿಸಲೂ ಇಲ್ಲ ಎನ್ನುವ ಒಂದು ಕೊರತೆ ಹಯವದನಕ್ಕೆ, ಸಂಗೀತ ನೀಡಿದ್ದರು.

ಕೃಪೆ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮೊದಲ ರಾತ್ರಿ ವಧು ತನ್ನ ಗಂಡನಿಗೆ ಕೇಸರಿಯುಕ್ತ ಬಾದಾಮಿ ಹಾಲು ಕೊಡುವುದೇಕೆ ಗೊತ್ತಾ..?

    ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಸುದ್ದಿ

    ಕುರುಕ್ಷೇತ್ರ ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷತೆ, ಏನೆಂದು ತಿಳಿಯಿರಿ?

    ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…