ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.
ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.
ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.
ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….