inspirational, ಸುದ್ದಿ

ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

76

ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. 
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್‌ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್‌ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್‌, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್‌ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.

ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್‌ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್‌, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್‌ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಜ್ಯೋತಿಷ್ಯ

    ಹಳದಿ ಬಟ್ಟೆ ಹಾಕಿರೋ ಹುಡುಗಿ ನಿಮ್ಮ ಕಣ್ಣಿಗೆ ಬಿದ್ರೆ ಏನಾಗುತ್ತೆ ಗೊತ್ತಾ?

    ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…

  • ಉಪಯುಕ್ತ ಮಾಹಿತಿ

    ಭಾರತ ಸೇರಿದಂತೆ ಜಗತ್ತಿನಾದ್ಯಂತ ಕೆಲಕಾಲ ವಾಟ್ಸಪ್ ಕ್ರ್ಯಾಶ್ ಆಗಿದೆ..!ತಿಳಿಯಲು ಇದನ್ನು ಓದಿ..

    ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…