ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.
ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.
ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.
ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…
ರಾಜಕೀಯ ಮುಖಂಡರು ತಾವು ಏನು ಹೇಳುತ್ತಿದ್ದೇವೆ ಎಂಬ ಪರಿವೆ ಇಲ್ಲದೇ ಇಲ್ಲ ಸಲ್ಲದ ವಿವಾಧತ್ಮಕ ಹೇಳಿಕೆಗಳನ್ನು ಕೊಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಈಗ ಹಿಂದೂಗಳು ಹಿಂಸಾಚಾರ ಮಾಡುತ್ತಾರೆ ಎಂಬುದನ್ನ ಈ ಹಿಂದೂ ಧರ್ಮದ ಈ ಮಹಾಕಾವ್ಯಗಳಿಗೆ ಹೋಲಿಕೆ ಮಾಡುವುದರ ಮುಖಾಂತರ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಹಿಂಸಾಚಾರ ಮಾಡ್ತಾರೆ ಎಂಬುದಕ್ಕೆ ರಾಮಾಯಣ-ಮಹಾಭಾರತವೇ ಸಾಕ್ಷಿ ಎಂದು ಹೇಳುವ ಮೂಲಕ ಸಿಪಿಐ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಯಚೂರಿ ವಿವಾದ ಸೃಷ್ಟಿಸಿದ್ದಾರೆ. ಹಿಂದೂಗಳು ಶಾಂತಿ ಪ್ರಿಯರು ಆದ್ರೆ ಕೆಲ ಧರ್ಮದವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಕೆಲ ಬಿಜೆಪಿ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…