ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…