ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ.
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.
ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.
ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…
ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…