ಸಿನಿಮಾ

ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

130

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ.

ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮೊದಲಿಂದಲೂ ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಯವರೊಂದಿಗೆ ಒಡನಾಟ ಇದೆ. ಅವರ ಮನೆಯಲ್ಲಿ ದರ್ಶನ್ ದೊಡ್ಡ ಮಗನಂತಿದ್ದಾರೆ. ಅಕ್ಕ ಒಂದು ನಿರ್ಧಾರ ತಗೊಂಡಿದ್ದಾರೆ. ಅದಕ್ಕೆ ನಾವು ಯೋಚನೆ ಮಾಡುವ ಅಗತ್ಯ ಇಲ್ಲ. ಅಕ್ಕ ಎಲ್ಲಿ ಹೆಜ್ಜೆ ಇಡುತ್ತಾರೋ ಅವರನ್ನ ನಾವು ಹಿಂಬಾಲಿಸುತ್ತೇವೆ ಎಂದು ಹೇಳಿದರು.

ಅಂಬರೀಶಣ್ಣ ನಮಗೆ ತುಂಬಾ ಅನುಕೂಲ ಮಾಡಿದ್ದಾರೆ. ಮಂಡ್ಯ ಜನಕ್ಕೆ ಅಂಬರೀಶಣ್ಣ ಯಾರು? ಏನು ಅಂತ ಗೊತ್ತು. ಅಷ್ಟು ವರ್ಷ ಜನರ ಪ್ರೀತಿ ಗಳಿಸೋದು ಸುಲಭವಲ್ಲ. ಅಂಬರೀಶಣ್ಣ ಮಂಡ್ಯದ ಮನೆಮಗ. ಸುಮಲತಾ ಯಾಕೆ ಸ್ಪರ್ಧಿಸುತ್ತಿದ್ದಾರೆ ಅಂತ ಅರ್ಥ ಮಾಡ್ಕೋಬೇಕು. ಇದು ಸೂಕ್ಷ್ಮವಾದ ವಿಚಾರ, ಅವರು ರಾಜಕೀಯ ಲಾಭಕ್ಕಾಗಿ ಸ್ಪರ್ಧಿಸುತ್ತಿಲ್ಲ. ಮಂಡ್ಯದ ನಂಟಿಗೆ ಸರಿಸಾಟಿ ಯಾವುದೂ ಇಲ್ಲ ಎಂದು ಸುಮಲತಾ ಅವರ ಪರ ಯಶ್ ಬ್ಯಾಟಿಂಗ್ ಮಾಡಿದರು.

ಮಂಡ್ಯದ ಜನತೆಗೆ ಅಂಬರೀಶ್ ಪ್ರೀತಿ ಮೀರಿ ದೊಡ್ಡ ಶಕ್ತಿ ಇದೆ. ಮಂಡ್ಯದ ಜನತೆಗೆ ಜ್ಞಾನ, ಶಕ್ತಿ, ಪ್ರೀತಿ, ಒಡನಾಟ, ತಾಳ್ಮೆ, ಸಹನೆ ಎಲ್ಲ ಇದೆ. ಮಂಡ್ಯದ ಜನ ಅಂಬರೀಶ್ ಕುಟುಂಬವನ್ನು ಕೈ ಬಿಡಲ್ಲ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಸದಾ ಜೊತೆಗಿರುತ್ತೇವೆ ಎಂದು ಸುಮಲತಾ ಅವರಿಗೆ ಸಾಥ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಉಪಯುಕ್ತ ಮಾಹಿತಿ

    ನೀವು ಕೀ ಇಲ್ಲದೆಯೇ ಬೀಗವನ್ನು ತೆರೆಯಬಹುದು..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ದಿನಭವಿಷ್ಯ (27 ಫೆಬ್ರವರಿ, 2019) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು ಬಾಕಿಯಿರುವಸಾಲಗಳನ್ನು ಸಂಗ್ರಹಿಸಬಹುದು ಅಥವಾ…

  • ಸಿನಿಮಾ

    ಬಾಡಿಗೆ ಮನೆಯನ್ನು ಖಾಲಿ ಮಾಡಲು ಕೋರ್ಟ್ ನಲ್ಲಿ ಸಮಯ ಕೇಳಿದ ಯಶ್ ತಾಯಿ.!ಈ ಸುದ್ದಿ ನೋಡಿ..

    ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…